ಪುತ್ತೂರು ಕಂಬಳದಲ್ಲಿ ಕಿರಿಕ್ – ಸಮಸ್ಯೆ ಪರಿಹಾರಕ್ಕೆ ದೇವರ ಮೊರೆಹೋದ ಕಂಬಳ ಸಮಿತಿ

Public TV
2 Min Read

ಮಂಗಳೂರು: ಪುತ್ತೂರಿನಲ್ಲಿ (Puttur) ನಡೆದ ಕಂಬಳದ ವೇಳೆ ಬಿಗ್‌ಬಾಸ್ (Bigg Boss Kannada) ಖ್ಯಾತಿಯ ಸಾನ್ಯ ಅಯ್ಯರ್ ಅವರೊಂದಿಗೆ ಯುವಕನೊಬ್ಬ ಅಸಭ್ಯವಾಗಿ ವರ್ತಿಸಿದ್ದ ಘಟನೆ ಬೆಳಕಿಗೆ ಬಂದಿದ್ದು, ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಲು ಪುತ್ತೂರು ಕೋಟಿ-ಚೆನ್ನಯ ಜೋಡುಕೆರೆ ಕಂಬಳ (Kambala) ಸಮಿತಿ ದೇವರ ಮೊರೆ ಹೋಗಿದೆ. ಅಪಸ್ವರ ಮಾಡಿದವರಿಗೆ ದೇವರೇ ತಕ್ಕ ಬುದ್ಧಿ ಕಲಿಸಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿದೆ.

ಪುತ್ತೂರು ಕಂಬಳದಲ್ಲಿ ಬಿಗ್‌ಬಾಸ್ ಖ್ಯಾತಿಯ ಸಾನ್ಯ ಅಯ್ಯರ್ (Sanya Iyer) ಕಿರಿಕ್ ವಿಚಾರವಾಗಿ ಪರಿಹಾರ ಕಂಡುಕೊಳ್ಳಲು ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಏಕದಶರುದ್ರ ಸೇವೆ ಮಾಡಿಸಿ ಪ್ರಾರ್ಥನೆ ಸಲ್ಲಿಸಿದೆ. ಇದನ್ನೂ ಓದಿ: ನಾನು ರುದ್ರಾಕ್ಷಿ ಧರಿಸಿದ್ದೇನೆ, ಮದ್ಯಪಾನ ಮಾಡಲ್ಲ : ನಟಿ ಸಾನ್ಯಾ ಅಯ್ಯರ್

ಈ ವೇಳೆ ಕಂಬಳದಲ್ಲಿ ನಡೆದ ಘಟನೆಗೂ ಕಂಬಳ (Kambala) ಸಮಿತಿಗೂ ಸಂಬಂಧವಿಲ್ಲ. ಅತಿಥಿಯಾಗಿ ಬಂದವರನ್ನ ಊಟ ಮಾಡಿಸಿ, ಸುರಕ್ಷಿತವಾಗಿ ಕಳುಹಿಸಿ, ಬಿಟ್ಟು ಬಂದಿದ್ದೇವೆ. ಆ ಬಳಿಕ ಏನಾಗಿದೆ ಅನ್ನೋದು ಮರುದಿನ ನಮಗೆ ತಿಳಿದುಬಂದಿದೆ. ಪುತ್ತೂರಿನ ದೇವರಮಾರು ಗದ್ದೆಯಲ್ಲಿ ಜಗಳ ಅಥವಾ ಅಸಭ್ಯವಾಗಿ ವರ್ತಿಸಿದರೆ ಅವರಿಗೆ ಕ್ಷೇಮವಿಲ್ಲ. ಮಹಾಲಿಂಗೇಶ್ವರ ದೇವರ ಕಾರಣಿಕ ಎಲ್ಲಾ ಜನರಿಗೂ ಗೊತ್ತಿದೆ. ಈ ಘಟನೆಗೆ ಕಂಬಳ ಸಮಿತಿಯನ್ನು ಹೊಣೆ ಮಾಡಿದವರಿಗೆ ದೇವರೇ ಬುದ್ದಿ ಕಲಿಸಲಿ ಎಂದು ಮಹಾಲಿಂಗೇಶ್ವರ ದೇವರ ಮುಂದೆ ಕಂಬಳ ಸಮಿತಿ ಪ್ರಾರ್ಥನೆ ಸಲ್ಲಿಸಿದೆ.

ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ಮಾಜಿ ಶಾಸಕಿ ಶಕುಂತಲಾ ಶೆಟ್ಟಿ ಸೇರಿದಂತೆ ಅನೇಕರು ಪ್ರಾರ್ಥನೆಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಅವನು ನನಗೆ ಹೊಡೆಯಲಿಲ್ಲ, ನಾನು ಅವನಿಗೆ ಹೊಡೆಯಲಿಲ್ಲ : ನಟಿ ಸಾನ್ಯಾ ಅಯ್ಯರ್

ಏನಿದು ಘಟನೆ?
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಪುತ್ತೂರು ತಾಲೂಕಿನ ಮಹಾಲಿಂಗೇಶ್ವರ ದೇವಸ್ಥಾನದ ಮುಂಭಾಗದ ದೇವಮಾರು ಗದ್ದೆಯಲ್ಲಿ ಇತ್ತೀಚೆಗೆ ಕಂಬಳ ನಡೆದಿತ್ತು. ಈ ವೇಳೆ ಕಂಬಳಕ್ಕೆ ಅತಿಥಿಯಾಗಿ ಬಂದಿದ್ದರು. ಮಧ್ಯರಾತ್ರಿ ಮತ್ತೆ ಸಾನ್ಯ ಸ್ನೇಹಿತರೊಡನೆ ಕಂಬಳಕ್ಕೆ ಆಗಮಿಸಿದ್ದರು. ಈ ವೇಳೆ ಯುವಕನೊಬ್ಬ ಕೈಹಿಡಿದು ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಸಾನ್ಯ ಹಾಗೂ ಅವರ ಸ್ನೇಹಿತೆಯರು ಪ್ರಶ್ನೆ ಮಾಡಿದ್ದರು. ಬಳಿಕ ಕಂಬಳ ಆಯೋಜಕರನ್ನು ತರಾಟೆ ತೆಗೆದುಕೊಂಡಿದ್ದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *