ತಮಿಳುನಾಡಲ್ಲಿ ನಾಳೆಯಿಂದ ಚಿನ್ನಮ್ಮನ ರಾಜ್ಯಭಾರ, ಪನೀರ್ ಸೆಲ್ವಂ ರಾಜೀನಾಮೆ

Public TV
0 Min Read

ಚೆನ್ನೈ: ಎಐಎಡಿಎಂಕೆಯ ಪ್ರಧಾನ ಕಾರ್ಯದರ್ಶಿ, ಜಯಲಲಿತಾ ಆಪ್ತೆ ಶಶಿಕಲಾ ನಟರಾಜನ್ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಲಿದ್ದಾರೆ.

ಇಂದು ಚೆನ್ನೈನ ಪೋಯಸ್ ಗಾರ್ಡನ್ ನಿವಾಸದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಎಐಎಡಿಎಂಕೆಯ ಶಾಸಕಾಂಗ ಪಕ್ಷದ ನಾಯಕಿಯಾಗಿ ಶಶಿಕಲಾ ಆಯ್ಕೆಯಾಗಿದ್ದು, ಸಿಎಂ ಸ್ಥಾನಕ್ಕೆ ಓ ಪನೀರ್ ಸೆಲ್ವಂ ರಾಜೀನಾಮೆ ನೀಡಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಅಮ್ಮನಂತೆಯೇ ಇರ್ತೀನಿ, ಅವರ ಮಾರ್ಗದಲ್ಲೇ ನಡೆಯುತ್ತೇನೆ ಎಂದಿದ್ದ ಶಶಿಕಲಾ ಇಂದಿನ ಸಭೆಯ ಬಳಿಕ ಪಕ್ಷದ ಕಾರ್ಯಕರ್ತರ ಮುಂದೆ ಜಯಲಲಿತಾ ತುಂಬಾ ಇಷ್ಟಪಡುತ್ತಿದ್ದ ಹಸಿರು ಬಣ್ಣದ ಸೀರೆಯಲ್ಲಿ ಕಾಣಿಸಿಕೊಂಡರು.

Share This Article
Leave a Comment

Leave a Reply

Your email address will not be published. Required fields are marked *