ಮಧ್ಯಾಹ್ನದ ನಂತರ ಸೆಷನ್ಸ್ ಕೋರ್ಟ್‍ಗೆ ಶಶಿಕಲಾ ಶರಣು- ಪರಪ್ಪನ ಅಗ್ರಹಾರದಲ್ಲಿ ಟೈಟ್ ಸೆಕ್ಯೂರಿಟಿ

Public TV
1 Min Read

ಬೆಂಗಳೂರು: ಅಕ್ರಮ ಅಸ್ತಿ ಗಳಿಕೆಯ ಹಿನ್ನೆಲೆಯಲ್ಲಿ ಶಿಕ್ಷೆಗೆ ಗುರಿಯಾಗಿರುವ ಶಶಿಕಲಾ ನಟರಾಜನ್, ಇಳವರಸಿ ಹಾಗೂ ಸುಧಾಕರನ್ ಇಂದು ಬೆಂಗಳೂರಿನ ಪರಪ್ಪನ ಅಗ್ರಹಾರದಲ್ಲಿರುವ ವಿಶೇಷ ಸತ್ತ್ರ ನ್ಯಾಯಾಲಯದಲ್ಲಿ ಹಾಜರಾಗಲಿದ್ದಾರೆ.

ಸುಪ್ರೀಂ ಕೋರ್ಟ್‍ನಿಂದ ಶಿಕ್ಷೆ ಪ್ರಕಟಿಸಿ ಆದೇಶ ಹೊರಬೀಳುತ್ತಿದ್ದಂತೆ ಚೆನ್ನೈನಲ್ಲಿ ಕ್ಷಿಪ್ರ ರಾಜಕೀಯ ಬೆಳವಣಿಗೆಗಳು ನಡೆದಿದೆ. ಮಂಗಳವಾರವೇ ಬೆಂಗಳೂರಿಗೆ ಬಂದು ಶರಣಾಗಬೇಕಿದ್ದ ಶಶಿಕಲಾ ತಮ್ಮ ಬೆಂಬಲಿತ ಅಭ್ಯರ್ಥಿಯನ್ನು ಸಿಎಂ ಮಾಡುವ ಉದ್ದೇಶದಿಂದ ಚೆನ್ನೈನಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಶಶಿಕಲಾ ಶರಣಾಗಲಿರುವ ಹಿನ್ನೆಲೆಯಲ್ಲಿ ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿ ವ್ಯವಸ್ಥೆಗಳು ಅರಂಭಗೊಂಡಿದೆ. ಈ ಹಿಂದೆ ಜಯಲಲಿತಾರನ್ನು ಇರಿಸಲಾಗಿದ್ದ ಮಹಿಳಾ ಬ್ಯಾರಕ್‍ನಲ್ಲಿ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಜಯಲಲಿತಾ ಪ್ರಕರಣಕ್ಕೆ ಸಂಬಂಧಿಸಿದಂತೆ ಪರಪ್ಪನ ಅಗ್ರಹಾರದಲ್ಲಿ ಸ್ಥಾಪಿಸಲಾಗಿದ್ದ ವಿಶೇಷ ಸತ್ತ್ರ ನ್ಯಾಯಾಲಯವನ್ನು ಮಂಗಳವಾರವೇ ಜೈಲು ಸಿಬ್ಬಂದಿ ಸ್ವಚ್ಚಗೊಳಿಸಿದ್ದಾರೆ. ವಿಶೇಷ ನ್ಯಾಯಾಧೀಶರಾಗಿ ಆಶ್ವಥ್ ನಾರಾಯಣ್ ರವರನ್ನು ನಿಯೋಜಿಸಲಾಗಿದೆ. ಶಶಿಕಲಾ ಕೋರ್ಟ್ ಗೆ ಹಾಜರಾಗಲಿದ್ದು, ಮುಂದಿನ ತೀರ್ಮಾನವನ್ನು 36 ನೇ ವಿಶೇಷ ಸತ್ತ್ರ ನ್ಯಾಯಾಲಯದ ನ್ಯಾಯಾಧೀಶರು ಕೈಗೊಳ್ಳಲಿದ್ದಾರೆ. ಕೋರ್ಟ್ ಸುತ್ತ ಮುತ್ತ ಪೆÇಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.

ಈ ಮಧ್ಯೆ ಶಶಿಕಲಾ ನಟರಾಜನ್ ತನ್ನ ಸಂಬಂಧಿ ದಿನಕರನ್‍ಗೆ ಎಐಎಡಿಎಂಕೆಯ ಉಪ ಪ್ರಧಾನ ಕಾರ್ಯದರ್ಶಿ ಪಟ್ಟಕಟ್ಟಿದ್ದಾರೆ. 2011ರಲ್ಲಿ ಜಯಲಲಿತಾ ದಿನಕರನ್‍ಗೆ ಪಕ್ಷದಿಂದ ಗೇಟ್‍ಪಾಸ್ ಕೊಟ್ಟಿದ್ದರು. ಆದ್ರೆ ಕಳೆದ ರಾತ್ರಿ ಕ್ಷಮಾಪಣಾ ಪತ್ರ ಬರೆಸಿಕೊಂಡು ಮತ್ತೆ ದಿನಕರನ್‍ರನ್ನು ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳಲಾಗಿದೆ. ದಿನಕರನ್ ಜೊತೆ ಮತ್ತೋರ್ವ ಸಂಬಂಧಿ ಡಾ.ವೆಂಕಟೇಶ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *