ಸಚಿವ ಸ್ಥಾನದಿಂದ ಕೈ ಬಿಟ್ರೂ ಸಹೋದರ ಪಕ್ಷದಲ್ಲೇ ಇರ್ತಾರೆ: ಸತೀಶ್ ಜಾರಕಿಹೊಳಿ

Public TV
1 Min Read

ಬೆಳಗಾವಿ: ಸಂಪುಟ ವಿಸ್ತರಣೆ ಹಿನ್ನೆಲೆಯಲ್ಲಿ ರಮೇಶ್ ಜಾರಕಿಹೊಳಿ ಅವರನ್ನು ಸಚಿವ ಸ್ಥಾನದಿಂದ ಕೈ ಬಿಟ್ಟರೂ ಅವರು ಪಕ್ಷದಲ್ಲೇ ಇರ್ತಾರೆ, ಜೊತೆಗೂಡಿ ಇಬ್ಬರು ಕೆಲಸ ಮಾಡ್ತೀವಿ ಎಂದು ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯಿಸಿದ್ದಾರೆ.

ಇಂದು ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆ ನಡೆಯುವ ಹಿನ್ನೆಲೆಯಲ್ಲಿ ಮಾಧ್ಯಮದೊಂದಿಗೆ ಸತೀಶ್ ಜಾರಕಿಹೊಳಿ ಮಾತನಾಡಿ, ಸಂಪುಟ ಸೇರ್ಪಡೆ ಬಗ್ಗೆ ಈವರೆಗೂ ಪಕ್ಷದಿಂದ, ಸರ್ಕಾರದಿಂದ ಅಧಿಕೃತವಾಗಿ ಮಾಹಿತಿ ಬಂದಿಲ್ಲ. ಆದ್ರೆ ಮಾಧ್ಯಮಗಳಿಂದ ಸಂಪುಟ ಸೇರ್ಪಡೆ ಬಗ್ಗೆ ಗೊತ್ತಾಗಿದೆ ಅಂದ್ರು.

ನನ್ನನ್ನು ಈ ಹಿಂದೆ ಸಚಿವ ಸ್ಥಾನದಿಂದ ಕೈಬಿಟ್ಟಿದ್ದು ಅವಮಾನವಲ್ಲ. ನಮ್ಮ ಪಕ್ಷದ ತೀರ್ಮಾನವನ್ನು ಹಿಂದೆಯೂ ಒಪ್ಪಿದ್ದೇವೆ. ಸಂಪುಟ ವಿಸ್ತರಣೆಯಿಂದ ಸರ್ಕಾರಕ್ಕೆ ಯಾವುದೇ ತೊಂದರೆಯಿಲ್ಲ. ನನಗಿರಬಹುದು ಬೇರೆಯವರಿಗೆ ಇರಬಹುದು ಯಾವುದೇ ತೊಂದರೆಯಿಲ್ಲ ಎನ್ನುವ ಮೂಲಕ ಸಹೋದರ ರಮೇಶ ಜಾರಕಿಹೊಳಿಯನ್ನು ಸಚಿವ ಸ್ಥಾನದಿಂದ ಕೈ ಬಿಟ್ಟರು ಸರ್ಕಾರಕ್ಕೆ ತೊಂದರೆಯಿಲ್ಲ, ಇಬ್ಬರು ಜೊತೆಗೂಡಿ ಕೆಲಸ ಮಾಡ್ತೀವಿ ಎಂದು ಪರೋಕ್ಷವಾಗಿ ಹೇಳಿದರು.

ನಾನು ಮಂತ್ರಿ ಆದ್ರೆ ಬೆಳಗಾವಿ ಜಿಲ್ಲೆಗೆ ಮತ್ತೆ ರಾಜಕೀಯ ವೈಭವೀಕರಣ ಬರಲಿದೆ. ಇದರಿಂದ ಜಿಲ್ಲೆಯ ಅಭಿವೃದ್ಧಿಗೆ ಅನುಕೂಲ ಆಗುತ್ತದೆ. ಎಲ್ಲಾ ಶಾಸಕರು ಸೇರಿ ಕೆಲಸ ಮಾಡ್ತುತ್ತೇವೆ. ರಮೇಶ್ ಪಕ್ಷದಲ್ಲೇ ಇರ್ತಾರೆ. ಅವರ ಜೊತೆಗೆ ನಾನು ಮಾತನಾಡುತ್ತೇನೆ. ಜಿಲ್ಲಾ ಮುಖಂಡರು ಅವರ ಜೊತೆಗೆ ಮಾತನಾಡುತ್ತಾರೆ. ಬರುವ ಲೋಕಸಭಾ ಚುನಾವಣೆಯನ್ನು ಎಲ್ಲರು ಒಟ್ಟಾಗಿ ಎದುರಿಸುತ್ತೇವೆ ಅಂತ ತಿಳಿಸಿದ್ರು.

ಕಾಂಗ್ರೆಸ್ ಪಕ್ಷ ಗಟ್ಟಿಯಾಗಿದೆ, ನಮ್ಮಲ್ಲಿ ಒಗ್ಗಟ್ಟಿದೆ. ಯಾವ ಖಾತೆ ನೀಡ್ತಾರೆ ಎನ್ನುವುದು ಗೊತ್ತಿಲ್ಲ. ಯಾವುದೇ ಒಳ್ಳೆಯ ಖಾತೆ ನೀಡಿದರು ಕೆಲಸ ಮಾಡುತ್ತೇವೆ. ಸಾರ್ವಜನಿಕವಾಗಿ ಒಳ್ಳೆಯ ಕೆಲಸ ಮಾಡುವ ಖಾತೆ ನೀಡಿದರೆ ಖುಷಿಯಾಗುತ್ತೆ. ಈಗಿರುವ ಖಾಲಿ ಖಾತೆಯಲ್ಲಿ ಯಾವುದಾದರೂ ಒಂದು ಖಾತೆ ನೀಡ್ತಾರೆ ಅಂತಾ ಊಹಿಸಿದ್ದೇನೆ ಎಂದು ಸತೀಶ್ ಜಾರಕಿಹೊಳಿ ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *