ಗಿಡ ನೆಟ್ಟು ಸಾಲುಮರದ ತಿಮ್ಮಕ್ಕನಿಗೆ ಸಂತಾಪ ಸೂಚಿಸಿದ ಸತೀಶ್ ಜಾರಕಿಹೊಳಿ

Public TV
2 Min Read

– ವೋಟ್ ಚೋರಿ ಬಗ್ಗೆ ಆಯೋಗ ಉತ್ತರ ಕೊಡ್ಬೇಕು

ದಾವಣಗೆರೆ: ಸಚಿವ ಸತೀಶ್ ಜಾರಕಿಹೊಳಿಯವರು (Satish Jarkiholi) ಹರಿಹರದ (Harihara) ರಾಜನಹಳ್ಳಿ ವಾಲ್ಮೀಕಿ ಗುರುಪೀಠದಲ್ಲಿ ಗಿಡ ನೆಟ್ಟು ಅಗಲಿದ ಸಾಲುಮರದ ತಿಮ್ಮಕ್ಕನಿಗೆ (Salumarada Thimmakka) ಸಂತಾಪ ಸೂಚಿಸಿದ್ದಾರೆ.

ರಸ್ತೆ ಅಭಿವೃದ್ಧಿ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲು ಸಚಿವರು ಅಲ್ಲಿಗೆ ಆಗಮಿಸಿದ್ದರು. ಸಭೆಯಲ್ಲಿ ವಾಲ್ಮೀಕಿ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಸೇರಿದಂತೆ ಹಲವರು ಗಣ್ಯರು ಸಾಲುಮರದ ತಿಮ್ಮಕ್ಕ ಅವರಿಗೆ ಸಂತಾಪ ಸೂಚಿಸಿದರು. ಇದನ್ನೂ ಓದಿ: ಜಗತ್ತಲ್ಲಿ ಯಾವ್ದು ಶಾಶ್ವತವಲ್ಲ, ಯಾರಿಗೂ ತೊಂದರೆಯಾಗದಂತೆ ಪ್ರೀತಿಯಿಂದ ಬದುಕಿ – ಕೊನೆಕ್ಷಣದಲ್ಲಿ ರಾಜ್ಯದ ಜನತೆಗೆ ತಿಮ್ಮಕ್ಕನ ಭಾವನಾತ್ಮಕ ಸಂದೇ

ಬಳಿಕ ಮಾತನಾಡಿದ ಸಚಿವರು, ಸಾಲುಮರದ ತಿಮ್ಮಕ್ಕ ಕರ್ನಾಟಕದ ಹೆಮ್ಮೆ. ಸದಾ ಪರಿಸರದ ಬಗ್ಗೆ ಅವರು ಕಾಳಜಿ ವಹಿಸುತ್ತಿದ್ದರು. ಅವರನ್ನು ಪರಿಸರ ಸಂಬಂಧ ಕಾರ್ಯಕ್ರಮ ಇದ್ದರೆ ನೆನಪಿಸಿಕೊಳ್ಳುತ್ತೇವೆ. ಅವರ ಹೆಸರಿನ ಮೇಲೆ ಹೆಚ್ಚು ಕಾರ್ಯಕ್ರಮ ನಡೆಯುತ್ತಿದ್ದವು. ಅವರು ಸದಾ ಪ್ರೇರಣೆಯಾಗಿ ಮುಂದುವರೆಯುತ್ತಿದ್ದರು ಎಂದು ಹೇಳಿದ್ದಾರೆ.

ಬಿಹಾರ ಚುನಾವಣೆ ಫಲಿತಾಂಶ ಕಾಂಗ್ರೆಸ್‍ಗೆ ಪಾಠ, ಎಲ್ಲೆಲ್ಲಿ ಲೋಪದೋಷವಾಗಿದೆ ಎನ್ನುವುದು ಅತ್ಮವಲೋಕನಾ ಮಾಡಿಕೊಳ್ಳಬೇಕಿದೆ. ವೋಟ್ ಚೋರಿ ಬಗ್ಗೆ ಮೊದಲಿಂದಲೂ ಆರೋಪ ಕೇಳಿ ಬರುತ್ತಿದೆ. ಅದಕ್ಕೆ ಚುನಾವಣಾ ಅಯೋಗ ಉತ್ತರ ಕೊಡಬೇಕಿದೆ. ಬಿಹಾರದ ಜನತೆಯ ಮನಸ್ಥಿತಿಗೂ, ಇಲ್ಲಿಯ ಜನರ ಮನಸ್ಥಿತಿಗೂ ಬೇರೆ ಬೇರೆ ಇದೆ. ಕರ್ನಾಟಕದಲ್ಲಿ ಅಹಿಂದಕ್ಕೆ ಹೆಚ್ಚು ಮಹತ್ವ ಇದೆ. ಬಿಹಾರದಲ್ಲಿ ಎಲ್ಲಾರನ್ನೂ ಒಗ್ಗೂಡಿಸಲು ಸಾಧ್ಯವಿಲ್ಲ. ಕರ್ನಾಟಕದಲ್ಲಿ ಎಲ್ಲಾ ಅಹಿಂದ ವರ್ಗವನ್ನು ಒಗ್ಗೂಡಿಸಲು ಸಾಧ್ಯವಿದೆ. ಬಿಹಾರ ಚುನಾವಣೆ ಫಲಿತಾಂಶ ಗೆದ್ದರು ಚರ್ಚೆಯಾಗಬೇಕು ಸೋತರೂ ಚರ್ಚೆಯಾಗಬೇಕು ಎಂದಿದ್ದಾರೆ.

ಸಿಎಂ ಬದಲಾವಣೆ ವಿಚಾರದಲ್ಲಿ ಯಾವುದೇ ಚರ್ಚೆ ಇಲ್ಲ. ಐದು ವರ್ಷ ನಾನೇ ಸಿಎಂ ಎಂದು ಸಿದ್ದರಾಮಯ್ಯ ಅವರೇ ಹೇಳಿದ್ದಾರೆ, ಅವರೇ ಇರುತ್ತಾರೆ. ಸಂಪುಟ ಪುನರ್ ರಚನೆ ಹೈಕಮಾಂಡ್‍ಗೆ ಬಿಟ್ಟ ವಿಚಾರ. ದೆಹಲಿಗೆ ಹೋಗಿ ಬರುವ ಕೆಲಸ ಇರುತ್ತವೆ ಅದಕ್ಕೆ ಹೋಗಿ ಬರುತ್ತಾ ಇರ್ತಿವಿ. ಸಂಪುಟ ಪುನರ್ ರಚನೆ ಬಗ್ಗೆ ನಮ್ಮ ಜೊತೆ ಚರ್ಚೆ ಮಾಡೋದಿಲ್ಲ ಎಂದಿದ್ದಾರೆ.

ಇತ್ತೀಚೆಗೆ ಖರೀದಿಸಿದ್ದ ಹೊಸ ಹೆಲಿಕಾಪ್ಟರ್‍ನಲ್ಲಿ ಅವರು ಆಗಮಿಸಿದ್ದರು. ಅವರ ಜೊತೆ ಶಾಸಕ ಬಸವಂತಪ್ಪ, ರಘುಮೂರ್ತಿ, ದೇವೇಂದ್ರಪ್ಪ ಸಹ ಹಾಜರಿದ್ದರು. ಈ ವೇಳೆ ಅಭಿಮಾನಿಗಳು ಮುಂದಿನ ಸಿಎಂ ಸತೀಶ್ ಜಾರಕಿಹೊಳಿ ಎಂದು ಘೋಷಣೆ ಕೂಗಿದ್ದಾರೆ. ಇದೇ ವೇಳೆ ಚುನಾವಣಾ ದೃಷ್ಟಿಯಿಂದ ಹೆಲಿಕಾಪ್ಟರ್ ಬದಲಾವಣೆ ಮಾಡಿರುವುದಾಗಿ ತಿಳಿಸಿದ್ದಾರೆ. ಇದನ್ನೂ ಓದಿ: ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ನಿಧನಕ್ಕೆ ಈಶ್ವರ ಖಂಡ್ರೆ ಸಂತಾಪ

Share This Article