ಸತೀಶ್ ಜಾರಕಿಹೊಳಿ ಸಿಎಂ ಆಗಬೇಕು, ಆದ್ರೆ ತಪ್ಪೇನಿಲ್ಲ : ಸಿದ್ದರಾಮಯ್ಯ

Public TV
1 Min Read

ಬಾಗಲಕೋಟೆ: ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು ಸಿಎಂ ಆಗಬೇಕು. ಅವರು ಸಿಎಂ ಆದರೆ ತಪ್ಪೇನಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಜಿಲ್ಲೆಯ ಬಾದಾಮಿ ಪಟ್ಟಣದಲ್ಲಿ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಮಾಜಿ ಸಚಿವ ಸತೀಶ ಜಾರಕಿಹೊಳಿ ಎದುರಲ್ಲೇ ಹೇಳಿಕೆ ನೀಡಿದ ಸಿದ್ದರಾಮಯ್ಯ, ಎಲ್ಲಾ ಜನಾಂಗದವರು ಸಿಎಂ ಆಗಬೇಕು. ಎಲ್ಲರಿಗೂ ಅವಕಾಶ ಸಿಗಬೇಕು ಎಂದು ಹೇಳಿದರು.

ರಾಮಾಯಣ ನಮ್ಮ ಬದುಕಿಗೆ ಮಾರ್ಗದರ್ಶನ. ಅಂತಹ ಮಹಾನ್ ಕಾವ್ಯ ಬರೆದವರು ವಾಲ್ಮೀಕಿ. ಇದು ಇಡೀ ದೇಶವೇ ಹೆಮ್ಮೆ ಪಡುವ ಕೆಲಸ. ಬಲಾಡ್ಯರು ಸಮಾಜದಲ್ಲಿ ಅಸಮಾನತೆ ಕಾಯ್ದುಕೊಂಡು ಬರುತ್ತಿದ್ದು, ಸಮಾಜದಲ್ಲಿ ಸಮಾನತೆ ಬಂದರೆ ಶೋಷಣೆ ಸಾಧ್ಯವಿಲ್ಲ ಎಂಬುದು ಅವರ ಲೆಕ್ಕಾಚಾರ ಎಂದು ಹೇಳಿದರು. ಕೇವಲ ಮತದಾನದ ಹಕ್ಕು ಸಿಕ್ಕರೆ ಅದು ಸ್ವಾತಂತ್ರ್ಯ ಅಲ್ಲ. ಆರ್ಥಿಕ, ಸಾಮಾಜಿಕ ನ್ಯಾಯ ಸಿಕ್ಕಾಗ ಮಾತ್ರ ಸ್ವಾತಂತ್ರ್ಯ ಸಿಕ್ಕಂತೆ. ಈ ಹೀಗೆ ಹೇಳಿದವರು ಡಾ. ಬಿ.ಆರ್. ಅಂಬೇಡ್ಕರ್ ಅವರು. ಅಭಿವೃದ್ಧಿಗಾಗಿ ಮಾಡುವ ಹಣದಲ್ಲಿ ಎಸ್‍ಸಿ, ಎಸ್‍ಟಿ ಸಮುದಾಯಕ್ಕೆ ಜನಸಂಖ್ಯೆಯ ಅನುಗುಣವಾಗಿ ಹಣ ಹಂಚಬೇಕು ಎಂದು ತಿಳಿಸಿದರು.

ಸಿದ್ದರಾಮಯ್ಯ ವೇಗಕ್ಕೆ ಕಳಚಿ ಬಿದ್ದ ಮೈಕ್:
ಎಸ್‍ಟಿ, ಎಸ್‍ಸಿ ಜನರಿಗಾಗಿ ಉತ್ತಮ ಯೋಜನೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ ಎಂದು ಇದೇ ವೇಳೆ ಭುಜತಟ್ಟಿಕೊಂಡ ಸಿಎಂ ಸಿದ್ದರಾಮಯ್ಯ ಅವರ ರಭಸಕ್ಕೆ ವೇದಿಕೆ ಮೇಲೆ ಅಳವಡಿಸಿದ್ದ ಮೈಕ್ ಕಳಚಿ ಬಿದ್ದಿತು. ಇವನಾರವ ಇವನಾರವ ಎಂದಿನಿಸದಿರಯ್ಯ. ಇವ ನಮ್ಮವ, ಇವ ನಮ್ಮವ ಎಂದಿನಿಸರಯ್ಯ ಎಂದು ಬಸವಣ್ಣ ಹೇಳಿದ್ದಾರೆ. ಆದರೆ ಅದು ಅಲ್ಲಿಗೇ ನಿಂತೋಯ್ತು ಈಗೇನಿದ್ರು ಅವರಲ್ಲೇ, ನಾವಿಲ್ಲೆ ಅನ್ನುವ ಹಾಗಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಕಾರ್ಯಕ್ರಮದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮಾಜಿ ಸಚಿವ ಸತೀಶ್ ಜಾರಕಿಹೊಳಿ ಅವರು, ಎಲ್ಲ ಸಮಾಜದವರಿಗೂ ಅವಕಾಶ ಬರುತ್ತದೆ. ಆದರೆ ಅದಕ್ಕಾಗಿ ತಾಳ್ಮೆ ವಹಿಸಿ ಕಾಯಬೇಕು. ನಾವು ಅಷ್ಟೇ ಕಾಯೋಣ ಎಂದು ಹೇಳಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *