ಹಿಜಬ್-ಕೇಸರಿ ವಿವಾದ ತಣ್ಣಗಾಗಿಸುವ ಪ್ರಯತ್ನ ರಾಜ್ಯ ಸರ್ಕಾರ ಮಾಡಲಿ: ಸತೀಶ್ ಜಾರಕಿಹೊಳಿ

Public TV
1 Min Read

ಬೆಳಗಾವಿ: ರಾಜ್ಯದಲ್ಲಿ ತಾರಕಕ್ಕೇರುತ್ತಿರುವ ಹಿಜಬ್-ಕೇಸರಿ ವಿವಾದವನ್ನು ತಕ್ಷಣವೇ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಲಾ-ಕಾಲೇಜುಗಳಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಗಲಾಟೆ ಪ್ರಾರಂಭವಾಗಿದೆ. ಕೇಸರಿ ಹಾಗೂ ಅದರ ವಿರುದ್ಧ ಹಲವು ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಶಿಕ್ಷಣ ರಂಗದಲ್ಲಿ ಬಣ್ಣ, ಬಣ್ಣಗಳ ಮಧ್ಯೆ ಘರ್ಷಣೆ ನಡೆಯುತ್ತಿದೆ. ಈ ಘರ್ಷಣೆ ತಪ್ಪಿಸಲು ಸರ್ಕಾರ, ಶಾಲಾ ಆಡಳಿತ ಮಂಡಳಿ ಮುಂದಾಗಬೇಕು. ಈ ವಿವಾದ ರಾಜಕೀಯ ಆಗಿದೆ ಎಂದಿದ್ದಾರೆ. ಇದನ್ನೂ ಓದಿ: ಕೊರಗಜ್ಜನಿಗೆ ಅವಮಾನ ಮಾಡಿದ್ದ ಉಮರುಲ್ಲಾ ಬಾಷಿತ್ ಅರೆಸ್ಟ್

ಕಾಂಗ್ರೆಸ್ ಸರ್ಕಾರದ 60 ವರ್ಷಗಳ ಅವಧಿಯಲ್ಲಿ ಇಂಥ ಘಟನೆ ಎಂದೂ ನಡೆದಿಲ್ಲ. ಈಗ ಹೀಗೆ ಆಗಬಾರದಿತ್ತು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಈ ರೀತಿ ಆಗುತ್ತಿರುವುದು ದುರದೃಷ್ಟಕರ. ತಕ್ಷಣವೇ ವಿವಾದ ತಣ್ಣಗಾಗಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಮಾಡಬೇಕು ಎಂದು ಸತೀಶ್ ಆಗ್ರಹಿಸಿದ್ದಾರೆ. ಇದನ್ನೂ ಓದಿ: ಅನಧಿಕೃತ ಟೋಲ್ ರದ್ದಾಗದೆ ವಾಪಸ್ ಹೋಗಲ್ಲ- ಧರಣಿ ಕೂತ ʼಆಪತ್ಪಾಂಧವ ಆಸೀಫ್

Share This Article
Leave a Comment

Leave a Reply

Your email address will not be published. Required fields are marked *