ನನ್ನ ಹತ್ಯೆಗೆ ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ದುರುದ್ದೇಶವಿದೆ: ಸತೀಶ್ ರೆಡ್ಡಿ

Public TV
2 Min Read

ಬೆಂಗಳೂರು: ನನ್ನನ್ನ ಕೊಲ್ಲಲು ಸುಪಾರಿ ನೀಡಿರುವುದರ ಹಿಂದೆ ರಾಜಕೀಯ ಕಾರಣಗಳು ಇರಬಹುದು ಎಂದು ಸತೀಶ್ ರೆಡ್ಡಿ (Satish Reddy) ತಿಳಿಸಿದರು.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಘಟನೆಯ ಬಗ್ಗೆ ಸಿಎಂಗೆ ತಿಳಿಸಿದ್ದೇನೆ. ಭದ್ರತೆ ತೆಗೆದುಕೊಳ್ಳಲು ತಿಳಿಸಿದ್ದಾರೆ. ಆದರೆ ನನಗೆ ಭದ್ರತೆ ಬೇಡ ಎಂದು ಹೇಳಿದ್ದೇನೆ. ಚುನಾವಣೆ ಸಮೀಪವಿದರಿಂದಾಗಿ ಇದರ ಹಿಂದೆ ರಾಜಕೀಯ ಉದ್ದೇಶವಿದೆ. ಆದರೆ ಯಾವುದೇ ರಾಜಕೀಯ ಪಕ್ಷದ ಮೇಲೂ ಆರೋಪ ಮಾಡಲ್ಲ. ನಾನು ಯಾರಿಗೂ ದ್ರೋಹ ಮಾಡಿಲ್ಲ ಎಂದರು.

ನಾನು ಭಯ ಪಡಲ್ಲ. ಇದಕ್ಕೆಲ್ಲ ಹೆದರಲ್ಲ ಅಕ್ರಮವಾಗಿ ಹಣ ಸಂಪಾದನೆ ಮಾಡುವ ಉದ್ದೇಶವೂ ಇರಬಹುದು. ಈ ಬಗ್ಗೆ ಪೊಲೀಸರು ಕ್ರಮ ಕೈಗೊಳ್ಳುತ್ತಾರೆ. ಆರೋಪಿಗಳು ನನ್ನ ಚಲನವಲನ ಮೇಲೆ ಗಮನ ಇಟ್ಟಿದರಂತೆ. ಅವರು ಎಲ್ಲೆಲ್ಲಿ ಓಡಾಡಿದ್ದಾರೆ, ಏನೇನು ಮಾಡಿದಾರೆ ಅಂತ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ ಎಂದು ಮಾಹಿತಿ ನೀಡಿದರು.

ನನಗೆ ಯಾವುದೇ ಬೆದರಿಕೆ ಕರೆ ಬಂದಿಲ್ಲ. ಆದರೆ ಸುಪಾರಿ ಬಗ್ಗೆ ಮಾತಾಡಿರುವವ ಆಡಿಯೋ ಪೊಲೀಸರಿಗೆ ಸಿಕ್ಕಿದೆ. ನಾನು ಯಾರ ಮೇಲೂ ಆರೋಪ ಮಾಡಲ್ಲ. ಪಾರದರ್ಶಕ ತನಿಖೆ ಆಗಲಿ ಎಂದು ಆಗ್ರಹಿಸಿದರು.

ನಾನು ಪೂರ್ತಿ ರಾಜಕಾರಣದಲ್ಲೇ ಇದ್ದೇನೆ. ಈಗ ಯಾವುದೇ ಉದ್ಯಮದಲ್ಲಿ ನಾನು ಇಲ್ಲ. ಉದ್ಯಮ ಕಾರಣ ಸುಪಾರಿ ಹಿಂದೆ ಇಲ್ಲ. ರಾಜಕೀಯ ಕಾರಣವೇ ಸುಪಾರಿ ಹಿಂದೆ ಇದೆ. ಪೊಲೀಸರು ತನಿಖೆ ಮಾಡಿ ಅಪರಾಧಿಗಳನ್ನು ಜೈಲಿಗೆ ಕಳಿಸಲಿ ಎಂದು ಒತ್ತಾಯಿಸಿದರು. ಇದನ್ನೂ ಓದಿ: 6 ತಿಂಗಳಾದ್ರೂ ಪತ್ನಿಗೆ ಸಂಬಳ ಬಂದಿಲ್ಲ ಎಂದ ವ್ಯಕ್ತಿಗೆ ಸೊಂಟ ಮುರಿಯುತ್ತೇನೆ ಎಂದು ಬೆದರಿಕೆ ಹಾಕಿದ ಸಚಿವ

ಘಟನೆಯೇನು?: ಬಿಜೆಪಿ (BJP) ಶಾಸಕ ಮತ್ತು ವಿಧಾನಸಭೆ ಆಡಳಿತ ಪಕ್ಷದ ಮುಖ್ಯ ಸಚೇತಕ ಸತೀಶ್ ರೆಡ್ಡಿ ಕೊಲೆಗೆ 2 ಕೋಟಿ ರೂ. ಸುಪಾರಿ ನೀಡಿರುವ ಆರೋಪದಲ್ಲಿ ಇಬ್ಬರನ್ನು ಬೊಮ್ಮನಹಳ್ಳಿ ಪೊಲೀಸರು ಹೊಳಲ್ಕೆರೆಯಲ್ಲಿ ಬಂಧಿಸಿದ್ದಾರೆ. ಆಕಾಶ್, ಗಗನ್ ಬಂಧಿತ ಆರೋಪಿಗಳು. ಬಂಧಿತರನ್ನು ಕಸ್ಟಡಿಗೆ ಪಡೆದುಕೊಂಡು ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ. ಮುಖ್ಯ ಆರೋಪಿ (ಎ1) ವಿಲ್ಸನ್ ಗಾರ್ಡನ್ ನಾಗ ಪರಾರಿಯಾಗಿದ್ದು, ಆತನ ಪತ್ತೆಗೆ ಶೋಧ ನಡೆಸಲಾಗುತ್ತಿದೆ. ಇದನ್ನೂ ಓದಿ: ಮಾದಪ್ಪನ ದರ್ಶನಕ್ಕೆ ಭಕ್ತರ ದಂಡು- ಹಗ್ಗ ಹಿಡಿದು ನದಿ ದಾಟಿ ಬರುತ್ತಿರೋ ಜನ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *