`ಸತ್ಯ ಮೇವ ಜಯತೆ’ ಎಂದ ರೂಪಾ

Public TV
1 Min Read

ಬೆಂಗಳೂರು: ಐಪಿಎಸ್ ಅಧಿಕಾರಿ ಡಿ. ರೂಪಾ (D Roopa) ಹಾಗೂ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ಅವರ ನಡುವಿನ ಜಟಾಪಟಿಗೆ ಸಿಟಿ ಸಿವಿಲ್ ಕೋರ್ಟ್ (City Civil Court) ಬ್ರೇಕ್ ಹಾಕಿತ್ತು.

ಡಿ. ರೂಪಾ ವಿರುದ್ಧ ಮಾಡಿದ್ದ ಆರೋಪಗಳನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಕೋರ್ಟ್ ಮೆಟ್ಟಿಲೇರಿದ್ದರು. ವಿನಾಕಾರಣ ನನ್ನ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುತ್ತಿರೋ ರೂಪಾ ಅವರು ಮಾತನಾಡದಂತೆ ತಡೆಯಾಜ್ಞೆ ನೀಡುವಂತೆ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ವೇಳೆ ರೋಹಿಣಿ ಸಿಂಧೂರಿ ಅವರ ವಾದ ಆಲಿಸಿದ ಕೋರ್ಟ್ ರೋಹಿಣಿ ಸಿಂಧೂರಿ ಅವರ ವಿರುದ್ಧ ರೂಪಾ ಮಾತನಾಡದಂತೆ ತಡೆಯಾಜ್ಞೆ ನೀಡಿತ್ತು. ಇದನ್ನೂ ಓದಿ: ರೋಹಿಣಿ ವಿರುದ್ಧ ರೂಪಾ ಮಾತನಾಡಬಾರದು- ಕೋರ್ಟ್ ಆದೇಶ

Roopa Rohini Sindhuri

ನಂತರ ಐಪಿಎಸ್ (IPS) ಅಧಿಕಾರಿ ಡಿ.ರೂಪಾ ಪರ ವಕೀಲರು ತಮ್ಮ ಮನವಿ ಪುರಸ್ಕರಿಸುವಂತೆ ಮನವಿ ಮಾಡಿಕೊಂಡರು. ಈ ಹಿನ್ನೆಲೆಯಲ್ಲಿ ಕೋರ್ಟ್ ರೂಪಾ ಪರ ವಕೀಲರ ಮನವಿಯನ್ನೂ ಪುರಸ್ಕರಿಸಿದೆ. ಹಾಗಾಗಿ ರೂಪಾ ಫೇಸ್‌ಬುಕ್ (Facebook) ವಾಲ್‌ನಲ್ಲಿ ತಮ್ಮ ವಾದ ಕೇಳಲು ಅವಕಾಶ ನೀಡಿದ ಕೋರ್ಟ್‌ಗೆ ನಾನು ಅಬಾರಿಯಾಗಿದ್ದೇನೆ. ಜೊತೆಗೆ ನನ್ನ ಬೆಂಬಲಕ್ಕೆ ನಿಂತವರಿಗೆ ನಾನು ಧನ್ಯವಾದಗಳನ್ನ ತಿಳಿಸಲು ಬಯಸುತ್ತೇನೆ ಎಂದು ಬರೆದುಕೊಂಡಿದ್ದಾರೆ. ಇದನ್ನೂ ಓದಿ: ಕ್ಷಮೆ ಕೇಳದಿದ್ದರೆ 1 ಕೋಟಿ ರೂ. ಮಾನನಷ್ಟ ಕೇಸ್ – ರೂಪಾಗೆ ರೋಹಿಣಿ ಎಚ್ಚರಿಕೆ

ROHINI SINDURI

ನನಗೆ ಬೆಂಬಲ ಕೋರಿ ಮಾಡಿದ ಸಂದೇಶಗಳಿಂದ ನನ್ನ ಮೆಸೇಜ್‌ ಬಾಕ್ಸ್ ಪ್ರವಾಹದಂತೆ ತುಂಬಿ ಹೋಗಿದೆ, ನನಗೆ ಅತೀವ ಸಂತೋಷವಾಗಿದೆ ಎಂದು ಬರೆದುಕೊಂಡಿದ್ದು ಕೊನೆಯಲ್ಲಿ `ಸತ್ಯ ಮೇವ ಜಯತೆ’ ಎಂದು ಪೋಸ್ಟ್ ಕೊನೆಗೊಳಿಸಿದ್ದಾರೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *