KSRTC ಬಸ್ ಗೆ ಡಿಕ್ಕಿಯಾಗಿ ಮರಕ್ಕೆ ಗುದ್ದಿದ ಸ್ಕೂಲ್ ಬಸ್- 3 ವಿದ್ಯಾರ್ಥಿಗಳ ದುರ್ಮರಣ

Public TV
1 Min Read

ರಾಮನಗರ: ಚಾಲಕನ ನಿಯಂತ್ರಣ ತಪ್ಪಿದ ಸ್ಕೂಲ್ ಬಸ್ ಕೆಎಸ್‍ಆರ್ ಟಿಸಿ ಬಸ್‍ಗೆ ಡಿಕ್ಕಿ ಹೊಡೆದು ಬಳಿಕ ಮರಕ್ಕೆ ಗುದ್ದಿದ ಪರಿಣಾಮ ಮೂವರು ವಿದ್ಯಾರ್ಥಿಗಳು ಮೃತಪಟ್ಟ ಘಟನೆ ನಡೆದಿದೆ.

ಈ ಘಟನೆ ಕನಕಪುರ ತಾಲೂಕಿನ ದೊಡ್ಡಮರಳವಾಡಿ ಸಮೀಪದ ಅನ್ನಪೂರ್ಣೇಶ್ವರಿ ಆಶ್ರಮದ ಬಳಿ ನಡೆದಿದ್ದು, ಗುರುಕುಲ ಶಾಲೆಯ ಮೂವರು ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ. ಮೃತ ವಿದ್ಯಾರ್ಥಿಗಳು ಗುರುತು ಇನ್ನಷ್ಟೇ ಪತ್ತೆಯಾಗಬೇಕಿದೆ.

ಮರಳವಾಡಿ ಕಡೆಗೆ ಬರುತ್ತಿದ್ದ ಕನಕಪುರ-ತೇರುಬೀದಿ ಮಾರ್ಗದ ಬಸ್ ಗೆ ಸ್ಕೂಲ್ ಬಸ್ ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಸ್ಕೂಲ್ ಬಸ್ ನ ಛಾವಣಿ ಕಿತ್ತು ಬಂದು, ನಂತರ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನಾಲ್ಕು ವಿದ್ಯಾರ್ಥಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.

ಘಟನೆ ಸಂಬಂಧ ಹಾರೋಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೃತ ದೇಹಗಳನ್ನು ಕನಕಪುರ ತಾಲೂಕು ಆಸ್ಪತ್ರೆಗೆ ರವಾನಿಸಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹಾರೋಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *