30ಕ್ಕೂ ಹೆಚ್ಚು ಮಕ್ಕಳಿದ್ದ ಶಾಲಾ ವ್ಯಾನ್ ಡಿವೈಡರ್ ಗೆ ಡಿಕ್ಕಿ

Public TV
1 Min Read

ಕೋಲಾರ: ಚಾಲಕನ ಅಜಾಗರೂಕತೆಯಿಂದ ನಿಯಂತ್ರಣ ತಪ್ಪಿ ಶಾಲಾ ವ್ಯಾನ್ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದೆ.

ಜಿಲ್ಲೆಯ ಮಾಲೂರು ಹೊರವಲಯದ ಕೈಗಾರಿಕಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಮಾಲೂರಿನ ಹೊರವಲಯದಲ್ಲಿರುವ ಶ್ರೀ ಸಿದ್ದೇಶ್ವರ ಹೆರಿಟೇಜ್ ಸ್ಕೂಲ್ ಗೆ ಸೇರಿದ ವ್ಯಾನ್ ಇದಾಗಿದ್ದು, ವ್ಯಾನ್ ಚಾಲಕ ಪಾನಮತ್ತನಾಗಿ ಚಾಲನೆ ಮಾಡಿದ್ದೇ ಈ ಅಪಘಾತಕ್ಕೆ ಕಾರಣ ಎನ್ನಲಾಗಿದೆ.

ಅವಘಡ ಆದ ಸಂದರ್ಭದಲ್ಲಿ ಬಸ್ಸಿನಲ್ಲಿ ಸುಮಾರು 30 ಕ್ಕೂ ಹೆಚ್ಚು ಜನ ವಿದ್ಯಾರ್ಥಿಗಳಿದ್ದರು. ಆದ್ರೆ ಎಲ್ಲಾ ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದು, ವಿದ್ಯಾರ್ಥಿಗಳು ಮತ್ತು ಸ್ಥಳೀಯರು ನಿಟ್ಟುಸಿರು ಬಿಟ್ಟಿದ್ದಾರೆ. ಅಲ್ಲದೇ ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಷಕರು ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಈ ಘಟನೆ ಮಾಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ಸದ್ಯ ಸ್ಥಳೀಯರು ಚಾಲಕನ ಮೇಲೆ ಪ್ರಕರಣ ದಾಖಲು ಮಾಡಲು ಮುಂದಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *