ಶಾಸಕಿ ಅನಿತಾ ಕುಮಾರಸ್ವಾಮಿಗೆ ಛತ್ರಿ ಸೇವೆ ನೀಡಿದ ಶಾಲಾ ಸಿಬ್ಬಂದಿ

Public TV
1 Min Read

ರಾಮನಗರ: ನಗರದ ಖಾಸಗಿ ಶಾಲೆಯ ಕಾರ್ಯಕ್ರಮಕ್ಕೆ ಆಗಮಿಸಿದ್ದ ಶಾಸಕಿ ಅನಿತಾ ಕುಮಾರಸ್ವಾಮಿಯವರಿಗೆ ಸಿಬ್ಬಂದಿ ಛತ್ರಿ ಸೇವೆ ನೀಡಿದ್ದಾರೆ.

ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ನೂತನವಾಗಿ ಆಯ್ಕೆಯಾಗಿ ಬಂದ ಅನಿತಾ ಕುಮಾರಸ್ವಾಮಿಯವರು ಬಿಸಿಲಿಗೆ ಅಂಜಿ, ಸಿಬ್ಬಂದಿಯಿಂದ ಛತ್ರಿ ಸೇವೆ ಪಡೆದುಕೊಂಡಿದ್ದಾರೆ. ಅನಿತಾರವರು ನಗರದ ಖಾಸಗಿ ಶಾಲೆಯ ಕಾರ್ಯಕ್ರಮಕ್ಕೆ ಭಾಗವಹಿಸಿದ್ದರು. ಈ ವೇಳೆ ಕಾರ್ಯಕ್ರಮ ಶಾಲಾ ಆವರಣದಲ್ಲೇ ನಡೆಯುತ್ತಿದ್ದರಿಂದ ಬಿಸಿಲ ಝಳ ನೇರವಾಗಿ ಅವರನ್ನು ಕುಟುಕುತ್ತಿತ್ತು.

ಈ ವೇಳೆ ಇದನ್ನು ಗಮನಿಸಿದ ಶಾಲಾ ಆಡಳಿತ ಸಿಬ್ಬಂದಿ ಮೊದಲು ತಾವೇ ಛತ್ರಿ ಹಿಡಿದಿದ್ದರು, ಬಳಿಕ ಅನಿತಾರವರ ಗನ್ ಮ್ಯಾನ್ ಛತ್ರಿ ಹಿಡಿದು ಕಾರ್ಯಕ್ರಮ ಮುಗಿಯುವವರೆಗೂ ಬಿಸಿಲಿನಿಂದ ರಕ್ಷಿಸಿದ್ದಾರೆ. ನಂತರ ಅನಿತಾರವರು ಭಾಷಣ ಮಾಡುವ ವೇಳೆಯು ಸಿಬ್ಬಂದಿ ಛತ್ರಿ ಹಿಡಿದೇ ನಿಂತಿದ್ದರು. ವಿಪರ್ಯಾಸವೆಂದರೇ ಮಕ್ಕಳು ಹಾಗೂ ಕಾರ್ಯಕ್ರಮದಲ್ಲಿ ಹಾಜರಾಗಿದ್ದ ಎಲ್ಲರೂ ಸುಡು ಬಿಸಿಲಿನಲ್ಲೇ ಕುಳಿತಿದ್ದರೇ, ಶಾಸಕರು ಮಾತ್ರ ತಮ್ಮ ಸಿಬ್ಬಂದಿಯಿಂದ ಛತ್ರಿ ಸೇವೆ ಪಡೆದುಕೊಂಡರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *