ಉತ್ತರ ಕರ್ನಾಟಕ ಪ್ರವಾಹಕ್ಕೆ ಮಿಡಿದ ಮಕ್ಕಳ ಹೃದಯ

Public TV
1 Min Read

– ಕಣ್ಣೀರಾಕಿ ಚಂದಾ ಎತ್ತಿದ ಮಕ್ಕಳು

ಬೆಂಗಳೂರು: ಉತ್ತರ ಕರ್ನಾಟಕದಲ್ಲಿ ಉಂಟಾಗಿದ್ದ ಭೀಕರ ಪ್ರವಾಹದಿಂದ ತತ್ತರಿಸಿದ ಜನರಿಗಾಗಿ ಶಾಲಾ ವಿದ್ಯಾರ್ಥಿಗಳು ಕಣ್ಣೀರು ಹಾಕಿ ಚಂದಾ ಸಂಗ್ರಹ ಮಾಡಿದ್ದಾರೆ.

ಪಬ್ಲಿಕ್ ಟಿವಿಯ ‘ಬುಲೆಟ್ ರಿಪೋರ್ಟರ್’ನಲ್ಲಿ ರಾಮದುರ್ಗದ ಪ್ರವಾಹ ಪೀಡಿತ ಪ್ರದೇಶದ ಕುರಿತು ಪ್ರಸಾರವಾಗಿತ್ತು, ಅದರಲ್ಲಿ ರಾಮದುರ್ಗ ಶಾಲೆಯ ಮಕ್ಕಳಿಗೆ ಸಹಾಯ ಮಾಡುವಂತೆ ಅಲ್ಲಿನ ಮುಖ್ಯೋಪಾಧ್ಯಾಯರು ಮನವಿ ಮಾಡಿಕೊಂಡಿದ್ದರು. ಈ ಮನವಿಗೆ ಬನಶಂಕರಿಯಲ್ಲಿರುವ ಸೆಂಟ್ ಪೀಟರ್ಸ್ ಶಾಲೆಯ ಮಕ್ಕಳ ಮನ ಮಿಡಿದಿದ್ದು, ಪ್ರವಾಹ ಪೀಡಿತರಿಗಾಗಿ ಚಂದಾ ಸಂಗ್ರಹ ಮಾಡಿದ್ದಾರೆ.

ಪ್ರವಾಹದಿಂದ ಹಾನಿಯಾಗಿರುವ ದೃಶ್ಯಗಳನ್ನು ಮಾಧ್ಯಮದಲ್ಲಿ ನೋಡಿ ಸೆಂಟ್ ಪೀಟರ್ಸ್ ಶಾಲೆಯ ವಿದ್ಯಾರ್ಥಿಗಳು ಬೇಸರಗೊಂಡು ತಮ್ಮ ಮುಖ್ಯೋಪಾಧ್ಯಾಯರ ಬಳಿ ಹೋಗಿ, ಪ್ರವಾಹ ಪೀಡಿತರಿಗೆ ಸಹಾಯ ಮಾಡಲು ಬಯಸುತ್ತೇವೆ ಎಂದು ಕಣ್ಣೀರು ಹಾಕಿದ್ದಾರೆ. ಅಲ್ಲದೆ ಅವರಿಗಾಗಿ ಹಣ ಸಂಗ್ರಹಿಸಿ ನೀಡುತ್ತೇವೆ ಎಂದು ಹೇಳಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಬಯಸಿದ ಮಕ್ಕಳ ನಿರ್ಧಾರಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಅನುಮತಿ ನೀಡುವ ಮೂಲಕ ಮಕ್ಕಳ ಸಹಾಯ ಕಾರ್ಯಕ್ಕೆ ಕೈಜೊಡಿಸಿದ್ದಾರೆ.

ಈವರೆಗೆ ವಿದ್ಯಾರ್ಥಿಗಳೆಲ್ಲಾ ಸೇರಿ ಸುಮಾರು 25 ಸಾವಿರ ರೂಪಾಯಿ ಹಣ ಸಂಗ್ರಹ ಮಾಡಿದ್ದಾರೆ. ಈ ಹಣವನ್ನು ಪ್ರವಾಹ ಪೀಡಿತ ಜನರಿಗೆ ನೀಡಲು ಮಕ್ಕಳು ನಿರ್ಧರಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *