ಕೊಡಗಿನಲ್ಲಿ ತಗ್ಗಿದ ವರುಣನ ಆರ್ಭಟ- 5 ದಿನಗಳ ರಜೆಯ ನಂತರ ಶಾಲೆಗಳು ಪುನಾರಂಭ

Public TV
1 Min Read

ಮಡಿಕೇರಿ: ಕೊಡಗಿನಲ್ಲಿ ವರುಣನ ಆರ್ಭಟ ತಗ್ಗಿದ್ದು, ಜಿಲ್ಲೆಯ ಜನಜೀವನ ಸಹಜ ಸ್ಥಿತಿಗೆ ಮರಳುತ್ತಿದೆ. ಇಂದಿನಿಂದ ಅಂಗನವಾಡಿ, ಶಾಲೆಗಳು ಎಂದಿನಂತೆ ಆರಂಭಗೊಂಡಿದೆ.

ಕಳೆದ 2 ವಾರಗಳಿಂದ ಮಳೆ ಎಡೆಬಿಡದೆ ಸುರಿಯುತ್ತಿದ್ದ ಮಳೆ ಮಂಗಳವಾರ ರಾತ್ರಿಯಿಂದ ಕಡಿಮೆಯಾಗಿದೆ. ಕಳೆದ 5 ದಿನಗಳಿಂದ ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಮಳೆ ಕಡಿಮೆಯಾದ ಹಿನ್ನೆಲೆಯಲ್ಲಿ ಶಾಲೆಗಳು ಮತ್ತೆ ಆರಂಭಗೊಂಡಿದೆ.

ಭಾಗಮಂಡಲ ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಇಳಿದಿದೆ. ಅಲ್ಲದೇ ಮುಳುಗಡೆಯಾಗಿದ್ದ ರಸ್ತೆ ಹಾಗೂ ಸೇತುವೆ ಸಹಜ ಸ್ಥಿತಿಗೆ ಮರಳಿದೆ.

ಮಹಾಮಳೆಗೆ ಭಗಂಡೇಶ್ವರ ಕ್ಷೇತ್ರ ಜಲಾವೃತಗೊಂಡಿದ್ದು, ಗಾಳಿಯ ರಭಸಕ್ಕೆ ಹಲವೆಡೆ ವಿದ್ಯುತ್ ವ್ಯತ್ಯಯಯಾಗಿತ್ತು. ಗ್ರಾಮಗಳು ಕಗ್ಗತ್ತಲಲ್ಲಿ ಮುಳುಗಿತ್ತು. ಸದ್ಯ ವರುಣ ತನ್ನ ಆರ್ಭಟ ನಿಲ್ಲಿಸಿದ್ದರೂ ತುಂತುರು ಮಳೆಯಾಗುತ್ತಿದೆ.

Share This Article
Leave a Comment

Leave a Reply

Your email address will not be published. Required fields are marked *