ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳಿಂದ ಬೆಂಕಿ

Public TV
1 Min Read

ಹಾಸನ: ಮನೆ ಮುಂದೆ ನಿಲ್ಲಿಸಿದ್ದ ಸ್ಕೂಟರ್‌ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಸ್ಕೂಟರ್ ಸಂಪೂರ್ಣ ಸುಟ್ಟು ಕರಕಲಾಗಿರುವ ಘಟನೆ ಹಾಸನ ಜಿಲ್ಲೆಯ ಚೆನ್ನರಾಯಪಟ್ಟಣ ತಾಲೂಕಿನ ಶ್ರವಣಬೆಳಗೊಳದಲ್ಲಿ ನಡೆದಿದೆ.

ರವಿ ಅವರ ಬೈಕ್‍ಗೆ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ದುಡಿದ ಹಣವನ್ನು ಕೂಡಿಟ್ಟು 2017 ರಲ್ಲಿ ರವಿ ಸ್ಕೂಟರ್ ಖರೀದಿಸಿದ್ದರು. ತಮ್ಮ ಸ್ಕೂಟರನ್ನು ರಾತ್ರಿ ವೇಳೆ ಮನೆಯ ಮುಂದೆಯೇ ನಿಲ್ಲಿಸುತ್ತಿದ್ದರು. ಇದನ್ನು ಗಮನಿಸಿದ್ದ ಯಾರೋ ಕಿಡಿಗೇಡಿಗಳು, ಮೊದಲು ಸ್ಕೂಟರ್‍ಗೆ ಪೆಟ್ರೋಲ್ ಸುರಿದು, ನಂತರ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ಬಿಜೆಪಿಗೆ ವಲಸಿಗರು ಸೊಸೆ ಇದ್ದಂತೆ, ಮನೆಯಲ್ಲಿ ಎಲ್ಲರ ವಿಶ್ವಾಸ ಗಳಿಸಬೇಕು: ಸುಧಾಕರ್

ಬೆಂಕಿ ಹಚ್ಚಿದ ಕಿಡಿಗೇಡಿಗಳು ಯಾರು ಎಂಬುದು ಗೊತ್ತಾಗಿಲ್ಲ. ಆದರೆ ಯಾರೋ ಸ್ಕೂಟರ್ ಮಾಲೀಕ ರವಿಗೆ ಆಗದವರು ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪ್ರಕರಣ ದಾಖಲಿಸಿಕೊಂಡಿರುವ ಶ್ರವಣಬೆಳಗೊಳದ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ. ಇದನ್ನೂ ಓದಿ:  ಸಮಂತಾ, ನಾಗಚೈತನ್ಯ ವಿಚ್ಛೇದನ ಸ್ಟೋರಿಗೆ ಅಮೀರ್‌ ಖಾನ್‌ರನ್ನು ಎಳೆತಂದ ಕಂಗನಾ

Share This Article
Leave a Comment

Leave a Reply

Your email address will not be published. Required fields are marked *