ವಿಧಾನಸೌಧ ಸುತ್ತಮುತ್ತ ಮೂರು ದಿನ ನಿಷೇಧಾಜ್ಞೆ ಜಾರಿ – ಸಂಘಟನೆಗಳಿಂದ ಮುತ್ತಿಗೆ ಸಾಧ್ಯತೆ

Public TV
1 Min Read

ಬೆಂಗಳೂರು: ವಿಧಾನಸೌಧದಲ್ಲಿ ಅಧಿವೇಶನ ಹಿನ್ನೆಲೆಯಲ್ಲಿ ಇಂದಿನಿಂದ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ.

ಸಿಎಎ ಮತ್ತು ಕರ್ನಾಟಕ ಬಂದ್, ಕಳಸ ಬಂಡೂರಿ, ಸರೋಜಿನಿ ಮಹಿಷಿ ವರದಿ, ಆಶಾ ಕಾರ್ಯಕರ್ತರ ಪ್ರತಿಭಟನೆ ನಡೆದಿತ್ತು. ವಿಧಾನಸೌಧದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಕೆಲ ಸಂಘಟನೆಗಳು ಅಧಿವೇಶನ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ವಿಧಾನಸೌಧದ ಸುತ್ತಮುತ್ತಲಿನ 2 ಕಿ.ಮೀವರೆಗೂ ನಿಷೇಧ ಹೇರಲಾಗಿದೆ. ಜನವರಿ 20ರ ರಾತ್ರಿ 12ರವರೆಗೂ ನಿಷೇಧಾಜ್ಞೆ ಜಾರಿ ಮಾಡಲಾಗಿದೆ. ಇದರ ಜೊತೆಗೆ ನಗರ ಪೊಲೀಸರು ವಿಧಾನಸೌಧ ಸುತ್ತಮುತ್ತ ಎಂದಿನಂತೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಾರೆ.

ಸಿಬ್ಬಂದಿ, ರಾಜಕೀಯ ನಾಯಕರು, ವಿಧಾನಸೌಧಕ್ಕೆ ಸಂಬಂಧಪಡದ ವ್ಯಕ್ತಿಗಳ ಮೇಲೆ ಪೊಲೀಸ್ ಕಣ್ಣಿಟ್ಟಿದ್ದಾರೆ. ಇಷ್ಟೆಲ್ಲಾ ಪೊಲೀಸರ ಭದ್ರತೆಯ ನಡುವೆಯೂ ಹಲವು ಸಂಘಟನೆಗಳು ವಿಧಾನಸೌಧದ ಅಧಿವೇಶನಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಯಿದ್ದು ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *