ಮಲಗಿರುವಾಗ್ಲೇ ಕಲ್ಲು ಎತ್ತಾಕಿ ಸೆಕ್ಯೂರಿಟಿ ಗಾರ್ಡ್ ಹತ್ಯೆ

Public TV
1 Min Read

ಬೆಂಗಳೂರು: ಕಲ್ಲು ಎತ್ತಿ ಹಾಕಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಸಿಲಿಕಾನ್ ಸಿಟಿಯ ಪದ್ಮನಾಭನಗರದಲ್ಲಿ ನಡೆದಿದೆ.

ಈ ಘಟನೆ ಪದ್ಮನಾಭನಗರದ ಮುಖ್ಯರಸ್ತೆಯ ಕರ್ನಾಟಕ ಬ್ಯಾಂಕ್ ಎದುರುಗಡೆ ನಡೆದಿದೆ. ಲಿಂಗಪ್ಪ ಮೃತ ದುರ್ದೈವಿ. ಶನಿವಾರ ತಡ ರಾತ್ರಿ ದುಷ್ಕರ್ಮಿಗಳು ಕೊಲೆ ಮಾಡಿದ್ದಾರೆ. ಲಿಂಗಪ್ಪ ಮೂಲತಃ ಬಾಗಲಕೋಟೆ ಜಿಲ್ಲೆಯವರು ಎಂದು ತಿಳಿದು ಬಂದಿದೆ.

ಮೃತ ಲಿಂಗಪ್ಪ ಕಳೆದ ನಾಲ್ಕು ವರ್ಷಗಳಿಂದ ಬ್ಯಾಂಕಿನಲ್ಲಿ ಸೆಕ್ಯೂರಿಟಿ ಗಾರ್ಡ್ ಆಗಿ ಕೆಲಸ ಮಾಡುತ್ತಿದ್ದರು. ಆದರೆ ನಿನ್ನೆ ರಾತ್ರಿ ಮಲಗಿರುವಾಗ ದುಷ್ಕರ್ಮಿಗಳು ಬಂದು ಲಿಂಗಪ್ಪ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದಾರೆ. ಬಳಿಕ ಆರೋಪಿಗಳು ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ದುಷ್ಕರ್ಮಿಗಳು ಬ್ಯಾಂಕ್ ಎಟಿಎಂಗೆ ಯಾವುದೇ ರೀತಿಯಲ್ಲಿ ಹಾನಿ ಮಾಡಿಲ್ಲ.

ಇಂದು ಮುಂಜಾನೆ ಸ್ಥಳೀಯರು ನೋಡಿ ಪೊಲೀಸರಿಗೆ ಮಾಹಿತಿ ತಿಳಿಸಿದ್ದಾರೆ. ಮಾಹಿತಿ ತಿಳಿದ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ್ದಾರೆ. ಈ ಘಟನೆ ಪದ್ಮನಾಭನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share This Article
Leave a Comment

Leave a Reply

Your email address will not be published. Required fields are marked *