ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇನ್ನಿಲ್ಲ

Public TV
1 Min Read

ಬೆಂಗಳೂರು: ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಇಂದು ನಿಧನರಾಗಿದ್ದಾರೆ.

ಕಳೆದ 15 ದಿನಗಳಿಂದ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದ ನಟ ಪ್ರತೀ ದಿನ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ಕೂಡ ಚಿಕಿತ್ಸೆ ಪಡೆದ ನಂತರವೂ ಚೆನ್ನಾಗಿದ್ದರು. ಆದರೆ ಮಧ್ಯೆರಾತ್ರಿ 12.30ಕ್ಕೆ ಕೊನೆಯುಸಿರೆಳೆದಿದ್ದಾರೆ.

ನಟ ಅಶೋಕ್ ರಾವ್ ಪತ್ನಿ, ಮಗ ಹಾಗೂ ಸೊಸೆಯನ್ನು ಅಗಲಿದ್ದಾರೆ. ಅಶೋಕ್ ಅಗಲಿಕೆ ಬಗ್ಗೆ ನೆರೆಹೊರೆಯವರಾದ ಸುದರ್ಶನ್ ಮಾಹಿತಿ ಕೊಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‍ನಲ್ಲಿ ಬರೀ ಎರಡೇ ಅಲ್ಲ, ಮೂರು ಗುಂಪುಗಳಿವೆ: ಕಾರಜೋಳ

ಕನ್ನಡದ ನೂರಾರು ಸಿನಿಮಾಗಳಲ್ಲಿ ನಟಿಸಿರುವ ಹಿರಿಯ ಕಲಾವಿದರಾಗಿದ್ದರು. ಅಣ್ಣಾವ್ರೇ ಕರೆದು ಪರಶುರಾಮ ಚಿತ್ರದಲ್ಲಿ ಖಳನಾಯಕನ ಪಾತ್ರ ಮಾಡಿಸಿದ್ದರು. ಪರಶುರಾಮ ಸಿನಿಮಾ ಇವರಿಗೆ ಒಳ್ಳೆಯ ಹೆಸರನ್ನು ತಂದು ಕೊಟ್ಟಿತ್ತು.

Share This Article
Leave a Comment

Leave a Reply

Your email address will not be published. Required fields are marked *