ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ- ಶಿವರಾಂ

Public TV
1 Min Read

ಉಡುಪಿ: ಶಬರಿಮಲೆಗೆ ಹೊರಟವರು ಮಸೀದಿಗೆ ಹೋಗಲಿ ಎಂದು ಹಿರಿಯ ನಟ ಹಾಗೂ ರಾಜ್ಯ ಅಯ್ಯಪ್ಪ ಭಕ್ತ ಸಂಘದ ಅಧ್ಯಕ್ಷ ಶಿವರಾಂ ಕಿಡಿಕಾರಿದ್ದಾರೆ.

ಎಂಜಿಎಂ ಮೈದಾನದಲ್ಲಿ ನಡೆದ ಧರ್ಮ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ದೇವಾಲಯ ಮೊದಲು ಹುಟ್ಟಿತಾ? ನ್ಯಾಯಾಲಯ ಮೊದಲು ಹುಟ್ಟಿದೆಯೇ ಎಂದು ಪ್ರಶ್ನಿಸಿ, ನಾವು ಪಾರಂಪರಿಕವಾಗಿ ಬಂದ ಸಂಪ್ರದಾಯ ಪಾಲಿಸುತ್ತೇವೆ. ಶಬರಿಮಲೆಗೆ ಮಹಿಳೆಯರ ಪ್ರವೇಶಕ್ಕೆ ಸುಪ್ರೀಂಕೋರ್ಟ್ ನೀಡಿದ ತೀರ್ಪು ಕೋಟ್ಯಂತರ ಭಕ್ತರ ನೋವಿಗೆ ಕಾರಣವಾಗಿದೆ. ಮಹಿಳೆಯರು ಶಬರಿಮಲೆಗೆ ಪ್ರವೇಶ ಮಾಡುವುದು, ಅಯ್ಯಪ್ಪನಿಗೆ ಹಿಡಿಸದ ಸಂಪ್ರದಾಯ ಎಂದು ತಿಳಿಸಿದರು. ಇದನ್ನು ಓದಿ: ಕೋರ್ಟ್ ಧರ್ಮದ ತೀರ್ಮಾನ ಮಾಡಕೂಡದು: ಪೇಜಾವರ ಶ್ರೀ

ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ಉದ್ಧಟತನ ಪ್ರದರ್ಶನ ಮಾಡಿದ್ದಾರೆ. ಸುಪ್ರೀಂಕೋರ್ಟ್ ತೀರ್ಪಿನಿಂದಾಗಿ ದೇಶದಲ್ಲಿ ಹಿಂದೂಗಳಿಗೆ ಹಿಂದೂಗಳೇ ವಿರೋಧಿಗಳಾದರು. ಪವಿತ್ರ ಕ್ಷೇತ್ರಗಳಿಗೆ ತೊಂದರೆಯಾದಾಗ ಹಿಂದೂ ಸಮಾಜದವರು ಸುಮ್ಮನಿರಬಾರದು ಎಂದು ಹೇಳಿದರು.

ಬಾಕಿ ಇರುವ ತೀರ್ಪುಗಳನ್ನು ತೀರ್ಮಾನ ಮಾಡುವ ನಿರ್ಧಾರಕ್ಕೆ ಸುಪ್ರೀಂ ಕೋರ್ಟ್ ಮುಂದಾಗಿತ್ತು. ಹೀಗಾಗಿ ಸಲಿಂಗ ಲೈಂಗಿಕ ಕ್ರಿಯೆಗೆ ಒಪ್ಪಿಗೆ ನೀಡಲಾಯಿತು. ಅಷ್ಟೇ ಅಲ್ಲದೆ ಒಪ್ಪಿತ ಅಕ್ರಮ ಸಂಬಂಧ ಅಪರಾಧವಲ್ಲ ಅಂತ ಹೇಳಲಾಯಿತು. ಶಬರಿಮಲೆ ಪ್ರವೇಶಕ್ಕೆ ಮಹಿಳೆಯರಿಗೆ ಅವಕಾಶ ಕೊಡಲಾಯಿತು. ಈ ತೀರ್ಪುಗಳು ಸಮಾಜದ ಮೇಲೆ ಕೆಟ್ಟ ಪರಿಣಾಮ ಬೀರಿವೆ ಎಂದು ಆರೋಪಿಸಿದರು. ಇದನ್ನು ಓದಿ: ಅಯ್ಯಪ್ಪ ಸ್ವಾಮಿಯ ಅನುಗ್ರಹದಿಂದ ನನಗೆ ವರ್ಗಾವಣೆ ಸಿಕ್ತು: ರೆಹನಾ ಫಾತಿಮಾ

ಕ್ರಿಶ್ಚಿಯನ್ ಹಾಗೂ ಮುಸ್ಲಿಂ ಧರ್ಮದ ಇಬ್ಬರು ಮಹಿಳೆಯರು ಅಯ್ಯಪ್ಪನ ದರ್ಶನಕ್ಕೆ ಮುಂದಾಗಿದ್ದರು. ಸಾಮಾಜಿಕ ಕಾರ್ಯಕರ್ತೆ ರೆಹನಾ ಫಾತಿಮಾ ವಿರುದ್ಧ ವಾಗ್ದಾಳಿ ನಡೆಸಿದ ಶಿವರಾಂ ಅವರು, ಆಕೆ ಒಂದು ದಿನವಾದರೂ ಮಸೀದಿಗೆ ಹೋಗಿದ್ದಾಳಾ ಎಂದು ಪ್ರಶ್ನಿಸಿದರು. ಶಬರಿಮಲೆಗೆ ಮಹಿಳೆ ಪ್ರವೇಶದ ಕುರಿತು ಸುಪ್ರೀಂ ಕೋರ್ಟ್ ನೀಡಿದ ತೀರ್ಪು ಸಂಪ್ರದಾಯದ ಮೇಲೆ ಪರಿಣಾಮ ಬೀರಿದೆ. ಹೀಗಾಗಿ ತೀರ್ಪನ್ನು ಪುನರ್ ಪರಿಶೀಲನೆ ಮಾಡಬೇಕು ಎಂದು ಆಗ್ರಹಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *