ಟೋಲ್‍ನಲ್ಲಿ ನ್ಯಾಯಾಧೀಶರು ಹಾಗೂ ಗಣ್ಯರಿಗೆ ಪ್ರತ್ಯೇಕವಾದ ಲೇನ್ ನಿರ್ಮಿಸಿ: ಮದ್ರಾಸ್ ಹೈಕೋರ್ಟ್

Public TV
1 Min Read

ಚೆನ್ನೈ: ನ್ಯಾಯಾಧೀಶರು ಸೇರಿದಂತೆ ಗಣ್ಯರು ಹಾಗೂ ಅತೀ ಗಣ್ಯರಿಗೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಪ್ರತ್ಯೇಕ ಟೋಲ್ ಬೂತ್‍ಗಳನ್ನು ನಿರ್ಮಿಸುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಮದ್ರಾಸ್ ಹೈಕೋರ್ಟ್ ಆದೇಶ ನೀಡಿದ್ದು, ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಟೋಲ್ ಬಳಿ ನ್ಯಾಯಾಧೀಶರು ಹಾಗೂ ಗಣ್ಯ ವ್ಯಕ್ತಿಗಳು ಗಂಟೆಗಟ್ಟಲೇ ಕಾಯುವುದಲ್ಲದೇ, ತಮ್ಮ ದಾಖಲೆಗಳನ್ನು ತೋರಿಸುವುದರಿಂದ ಮುಜುಗರಕ್ಕಿಡಾಗುತ್ತದೆ. ಆದ್ದರಿಂದ ಎಲ್ಲಾ ನ್ಯಾಯಾಧೀಶರು ಹಾಗೂ ಗಣ್ಯ ವ್ಯಕ್ತಿಗಳಿಗಾಗಿಯೇ ಪ್ರತ್ಯೇಕವಾದ ಟೋಲ್ ಪ್ಲಾಜಾಗಳನ್ನು ನಿರ್ಮಿಸುವಂತೆ ಮದ್ರಾಸ್ ಹೈಕೋರ್ಟಿನ ನ್ಯಾಯಾಧೀಶರಾದ ಹುಲುವಾಡಿ ಜಿ ರಮೇಶ್ ಮತ್ತು ಎಂ.ವಿ.ಮುರಳೀಧರ ಅವರ ದ್ವಿಸದಸ್ಯ ಪೀಠ ಆದೇಶಿಸಿದೆ.

ಈ ಸಂಬಂಧ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಈ ಸಮಸ್ಯೆಯನ್ನು ಶೀಘ್ರವೇ ಬಗೆಹರಿಸಬೇಕು. ಇಲ್ಲವಾದಲ್ಲಿ ಪ್ರಾಧಿಕಾರಕ್ಕೆ ನೋಟಿಸ್ ನೀಡುವುದಾಗಿಯೂ ಪೀಠ ತಿಳಿಸಿದೆ.

ಈ ಆದೇಶವನ್ನು ದೇಶಾದ್ಯಂತ ಜಾರಿಗೊಳಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಪ್ರಾಧಿಕಾರಕ್ಕೆ ಮದ್ರಾಸ್ ಹೈಕೋರ್ಟ್ ಸುತ್ತೋಲೆ ಹೊರಡಿಸಿದೆ.

ಮದ್ರಾಸ್ ಹೈಕೋರ್ಟ್ ಆದೇಶವು ದೇಶಾದ್ಯಂತ ಚರ್ಚೆಗೆ ಕಾರಣವಾಗಿದ್ದು, ಈ ಸಂಬಂಧ ಕೇಂದ್ರ ಸರ್ಕಾರ ಹಾಗೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಯಾವ ರೀತಿ ನಿರ್ಣಯವನ್ನು ತೆಗೆದುಕೊಳ್ಳುತ್ತದೆ ಎನ್ನುವುದು ಸದ್ಯದ ಕುತೂಹಲವಾಗಿದೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

 

 

Share This Article
Leave a Comment

Leave a Reply

Your email address will not be published. Required fields are marked *