MBBS ವಿದ್ಯಾರ್ಥಿಯಿಂದ ಅವಾಂತರ – 3 ಕಾರುಗಳ ಮಧ್ಯೆ ಸರಣಿ ಅಪಘಾತ

Public TV
1 Min Read

ಬೆಂಗಳೂರು: ಕುಡಿದ ಮತ್ತಿನಲ್ಲಿ ಎಂಬಿಬಿಎಸ್ ವಿದ್ಯಾರ್ಥಿ ಮಾಡಿದ ಅವಾಂತರಕ್ಕೆ ಮೂರು ಕಾರುಗಳ ಮಧ್ಯೆ ಸರಣಿ ಅಪಘಾತವಾಗಿರುವ ಘಟನೆ ಬೆಂಗಳೂರಿನ ಪಾಪರೆಡ್ಡಿ ಪಾಳ್ಯದ ಬಳಿ ನಡೆದಿದೆ.

ಶುಕ್ರವಾರ ರಾತ್ರಿ ಈ ಘಟನೆ ನಡೆದಿದ್ದು, ಕಿಮ್ಸ್ ಆಸ್ಪತ್ರೆಯಲ್ಲಿ ಎಂಬಿಬಿಎಸ್ ವಿದ್ಯಾರ್ಥಿಯಾಗಿರೋ ರಾಹುಲ್ ಸುಮಾರು 10 ಗಂಟೆ ಕಂಠಪೂರ್ತಿ ಕುಡಿದು ಮಹೇಂದ್ರ ಕಾರಿನಲ್ಲಿ ಬರುತ್ತಿದ್ದನು. ಈ ವೇಳೆ ಕ್ರೇಟಾ, ಸ್ಕೂಡಾ ಕಾರು, ಮತ್ತೊಂದು ಕಾರಿನ ನಡುವೆ ಅಪಘಾತ ಉಂಟಾಗಿದೆ. ಅತಿ ವೇಗವೇ ಈ ಘಟನೆಗೆ ಕಾರಣ ಎನ್ನಲಾಗಿದೆ.

ಇನ್ನು ಈ ಅಪಘಾತದಿಂದ ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಎಲ್ಲರೂ ಪ್ರಾಣಾಪಾಯದಿಂದ ಪರಾಗಿದ್ದಾರೆ.

ಈ ಕುರಿತು ಕಾಮಾಕ್ಷಿಪಾಳ್ಯ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *