‘ಪಠಾಣ್’ ಚಿತ್ರಕ್ಕೆ ಒಳ್ಳೆಯ ಪ್ರಚಾರ ಸಿಕ್ತು, ಸಿನಿಮಾ ಗೆಲ್ಲುತ್ತೆ ಎಂದ ಶಾರುಖ್ ಖಾನ್

Public TV
2 Min Read

ಬಾಲಿವುಡ್ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ ವಿಚಾರ ದೇಶಾದ್ಯಂತ ಚರ್ಚೆ ಆಗುತ್ತಿದೆ. ಈ ಸಿನಿಮಾವನ್ನು ಬ್ಯಾನ್ ಮಾಡಿ ಎಂದು ಒಂದು ಗುಂಪು ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಮಾಡುತ್ತಿದ್ದರೆ, ಸಿನಿಮಾಗೆ ಬಣ್ಣದ ರಾಜಕೀಯ ತರಬೇಡಿ ಎಂದು ಮತ್ತೊಂದು ಗುಂಪು ವಾದ ಮಾಡುತ್ತಿದೆ. ಪಠಾಣ್ ಸಿನಿಮಾದ ಹಾಡು ರಿಲೀಸ್ ಆದ ದಿನದಿಂದ ಈ ತಿಕ್ಕಾಟ ನಡೆದಿದೆ. ಆದರೆ, ಈವರೆಗೂ ಸಿನಿಮಾ ತಂಡವಾಗಲಿ ಅಥವಾ ಶಾರುಖ್ ಖಾನ್ ಆಗಲಿ ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿರಲಿಲ್ಲ.

ಇದೇ ಮೊದಲ ಬಾರಿಗೆ ವಿವಾದದ ಕುರಿತು ಮಾತನಾಡಿರುವ ಶಾರುಖ್ ಖಾನ್. ನಾವು ಸಿನಿಮಾವನ್ನು ಸಿನಿಮಾದಂತೆ ನೋಡಬೇಕು. ನಾನಂತೂ ಸಿನಿಮಾವಾಗಿಯೇ ಅಲ್ಲಿ ಕೆಲಸ ಮಾಡಿದ್ದೇನೆ. ಈ ವಿವಾದವನ್ನು ಯಾಕೆ ಎಬ್ಬಿಸುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ನನ್ನ ಮನಸ್ಸಲ್ಲಂತೂ ಯಾವುದೇ ಕೆಟ್ಟ ಆಲೋಚನೆಗಳು ಇಲ್ಲ. ಈ ವಿವಾದದಿಂದ ಸಿನಿಮಾ ಸಾಕಷ್ಟು ಪ್ರಚಾರ ಪಡೆದುಕೊಂಡಿದೆ. ಹಾಗಾಗಿ ಜನರು ಚಿತ್ರವನ್ನು ಗೆಲ್ಲಿಸುತ್ತಾರೆ ಎನ್ನುವ ವಿಶ್ವಾಸ ನನಗಿದೆ ಎಂದು ಅವರು ಹೇಳಿದ್ದಾರೆ.

ಪಠಾಣ್ ಸಿನಿಮಾದ ಬೇಷರಂ ಹಾಡಿನಲ್ಲಿ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕೇಸರಿ ಬಿಕಿನಿ ಹಾಕಿದ್ದಾರೆ ಎನ್ನುವ ವಿವಾದ ತಾರಕಕ್ಕೇರಿದೆ. ಇದು ಬೇಕು ಅಂತಾನೇ ಮಾಡಿದ ಹುನ್ನಾರ ಎಂದು ಹಿಂದೂಪರ ಸಂಘಟನೆಗಳು ಆರೋಪಿಸುತ್ತಿವೆ. ಕೆಲ ಪ್ರಗತಿಪರ ಹೋರಾಟಗಾರರ ಜೊತೆ ದೀಪಿಕಾ ಪಡುಕೋಣೆ ಗುರುತಿಸಿಕೊಂಡಿದ್ದಾರೆ ಎಂದು ಜೆಎನ್‌ಯು ಹೋರಾಟದಲ್ಲಿ ದೀಪಿಕಾ ಭಾಗಿಯಾಗದ್ದ ಫೋಟೋವನ್ನು ಟ್ರೋಲ್ ಮಾಡಲಾಗುತ್ತಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಶಾಂತ್ ಸಂಬರಗಿ ಕೂಡ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ: ಸಿನಿಮಾ ಮೂಲಕ ಪತಿಯ ಪ್ರಜಾಕೀಯಕ್ಕೆ ಸಾಥ್ ನೀಡಿದ ಪ್ರಿಯಾಂಕ ಉಪೇಂದ್ರ

ಬಿಗ್ ಬಾಸ್ ಮನೆಯಿಂದ ಈ ವಾರ ಹೊರ ಬಂದಿರುವ ಪ್ರಶಾಂತ್ ಸಂಬರಗಿ ಪಠಾಣ್ ಸಿನಿಮಾದಲ್ಲಿ ದೀಪಿಕಾ ಪಡುಕೋಣೆ ಹಾಕಿರುವ ಕೇಸರಿ ಬಿಕಿನಿ ಬಗ್ಗೆ ತಕರಾರು ಎತ್ತಿದ್ದಾರೆ. ಬಾಲಿವುಡ್ ಚಿತ್ರೋದ್ಯಮ ಹಿಂದೂಗಳ ಭಾವನೆಗೆ ಹೀಗೆ ನೋವು ಮಾಡುತ್ತಿರುವುದು ಹೊಸದೇನೂ ಅಲ್ಲ, ಬಾಲಿವುಡ್ ನಟರ ಮದುವೆಗಳನ್ನು ನೋಡಿದರೆ ಲವ್ ಜಿಹಾದ್ ಬಗ್ಗೆ ಅನುಮಾನ ಮೂಡುತ್ತದೆ ಎಂದು ಅವರು ಮಾತನಾಡಿದ್ದಾರೆ. ದೀಪಿಕಾ ಅವರಿಗೆ ಬೇಕು ಅಂತಾನೇ ಕೇಸರಿ ಬಿಕಿನಿ ಹಾಕಿಸಲಾಗಿದೆ ಎಂದು ಅವರು ಆರೋಪ ಮಾಡಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *