`ಶಕ್ತಿ’ ಚಂಡಮಾರುತ ಎಫೆಕ್ಟ್ – ಗಡಿಜಿಲ್ಲೆ ಬೀದರ್‌ನಲ್ಲಿ ವರುಣನ ಅಬ್ಬರ ಜೋರು

Public TV
1 Min Read

ಬೀದರ್: ಅರಬ್ಬಿ ಸಮುದ್ರದಲ್ಲಿ ಶಕ್ತಿ (Shakti) ಚಂಡಮಾರುತದ ಹಿನ್ನೆಲೆ ಗಡಿಜಿಲ್ಲೆ ಬೀದರ್‌ನಲ್ಲಿ (Bidar) ವರುಣಾರ್ಭಟ ಜೋರಾಗಿದೆ.

ಸೋಮವಾರ (ಅ.6) ಬೆಳಗ್ಗೆಯಿಂದ ಬಿಟ್ಟು ಬಿಡದೇ ಧಾರಾಕಾರ ಮಳೆ ಸುರಿಯುತ್ತಿದ್ದು, ಗುಡುಗು, ಬಿರುಗಾಳಿ ಸಹಿತ ವರುಣ ಅಬ್ಬರಿಸುತ್ತಿದ್ದಾನೆ. ಬೀದರ್, ಹುಮ್ನಾಬಾದ್, ಬಸವ ಕಲ್ಯಾಣ, ಭಾಲ್ಕಿ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣವಾಗಿ ಅಸ್ತವ್ಯಸ್ತವಾಗಿದೆ.ಇದನ್ನೂ ಓದಿ: ಚಿತ್ರದುರ್ಗ | ರಸ್ತೆ ದಾಟುತ್ತಿದ್ದ ಪೊಲೀಸ್ ಕಾನ್ಸ್ಟೇಬಲ್‌ಗೆ ಲಾರಿ ಡಿಕ್ಕಿ – ಗಂಭೀರ ಗಾಯ

ವಿದ್ಯಾರ್ಥಿಗಳು ಶಾಲಾ-ಕಾಲೇಜುಗಳಿಗೆ ಹೋಗಲು ಪರದಾಡುವಂತಾಗಿದ್ದು, ಇತ್ತ ಕಚೇರಿ ಕೆಲಸಗಳಿಗೆ ಹೋಗಲು ಜನರು ಕೂಡ ಹೈರಾಣಾಗುತ್ತಿದ್ದಾರೆ. ಹವಾಮಾನ ಇಲಾಖೆಯ ಪ್ರಕಾರ ಇಂದು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

Share This Article