ಕತ್ತೆ ಅಂತ ಕರೆದು ವಿವಾದ – ಶಶಿ ತರೂರ್ ಕ್ಷಮೆಯಾಚಿಸಿದ ಕಾಂಗ್ರೆಸ್ ಮುಖ್ಯಸ್ಥ

Public TV
1 Min Read

ಹೈದರಾಬಾದ್: ಶಶಿ ತರೂರ್ ಅವರನ್ನು ಕತ್ತೆ ಎಂದು ಕರೆದು ವಿವಾದಕ್ಕೀಡಾದ ತೆಲಂಗಾಣ ಕಾಂಗ್ರೆಸ್ ಮುಖ್ಯಸ್ಥ ರೇವಂತ್ ರೆಡ್ಡಿ ಅವರು ಕ್ಷಮೆ ಕೇಳಿದ್ದಾರೆ.

ನಾನು ಈ ಮಾತುಗಳನ್ನು ಹಿಂತೆಗೆದುಕೊಳ್ಳುತ್ತೇನೆ ಮತ್ತು ನನ್ನ ಹಿರಿಯ ಸಹೋದ್ಯೋಗಿಯನ್ನು ಅತ್ಯುನ್ನತ ಗೌರವದಲ್ಲಿರಿಸುವೆ ಎಂದು ಪುನರುಚ್ಚರಿಸುತ್ತೇನೆ ಎಂದು ತಿಳಿಸಲು ಶಶಿ ತರೂರ್ ಅವರೊಂದಿಗೆ ಮಾತನಾಡಿದ್ದೇನೆ . ನನ್ನ ಮಾತುಗಳಿಂದ ಅವರಿಗೆ ಉಂಟಾದ ನೋವಿಗೆ ನಾನು ವಿಷಾದಿಸುತ್ತೇನೆ. ನಾವು ಕಾಂಗ್ರೆಸ್ ಪಕ್ಷದ ಮೌಲ್ಯಗಳು ಮತ್ತು ನೀತಿಗಳಲ್ಲಿ ನಮ್ಮ ನಂಬಿಕೆಯನ್ನು ಇರಿಸಿದ್ದೇವೆ ಎಂದು ರೆಡ್ಡಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: 1 ಸಾಲಿನಲ್ಲಿ ಪ್ರಧಾನಿಗೆ ವಿಶ್ ಮಾಡಿದ ರಾಹುಲ್ ಗಾಂಧಿ

ರೆಡ್ಡಿಯವರ ಟ್ವೀಟ್‍ಗೆ ಪ್ರತಿಕ್ರಿಯಿಸಿದ ತರೂರ್, ಪಕ್ಷದ ನಾಯಕನಿಂದ ಕರೆಯನ್ನು ಸ್ವೀಕರಿಸಿದ್ದೇನೆ ಎಂದು ಹೇಳಿದರು. ನಾನು ಅವರ ವಿಷಾದದ ಅಭಿವ್ಯಕ್ತಿಯನ್ನು ಸ್ವೀಕರಿಸುತ್ತೇನೆ ಮತ್ತು ಈ ದುರದೃಷ್ಟಕರ ಪ್ರಸಂಗವನ್ನು ಹಿಂದೆ ಸರಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ:  ಆರ್ಡರ್ ಮಾಡಿದ ಬರ್ಗರ್​ನಲ್ಲಿ ಸಿಕ್ತು ಕೈ ಬೆರಳು

ರೆಡ್ಡಿ ತರೂರ್ ಅವರನ್ನು ಕತ್ತೆ ಎಂದು ಕರೆದರು ಮತ್ತು ಅವರನ್ನು ಪಕ್ಷದಿಂದ ಉಚ್ಚಾಟಿಸಬೇಕು ಎಂದು ಹೇಳಿದ್ದರು. ರೆಡ್ಡಿ ಅವರ ಈ ಹೇಳಿಕೆ ವಿವಾದವನ್ನುಂಟುಮಾಡಿದ್ದು, ಹಿರಿಯ ನಾಯಕನ ಬಗ್ಗೆ ಈ ರೀತಿ ಮಾತನಾಡಿದ್ದಕ್ಕೆ ಆಕ್ರೋಶ ವ್ಯಕ್ತವಾಗಿತ್ತು. ಇದೀಗ ಅವರು ಕ್ಷಮೆ ಕೇಳಿರುವುದು ಸುದ್ದಿಯಾಗಿದೆ.

Share This Article
Leave a Comment

Leave a Reply

Your email address will not be published. Required fields are marked *