ಉಡುಪಿಯ ಶಿರೂರು ಶ್ರೀಗಳು ವಿಧಿವಶ

Public TV
1 Min Read

ಉಡುಪಿ: ಇಲ್ಲಿನ ಅಷ್ಠಮಠಾಧೀಶರಲ್ಲಿ ಒಬ್ಬರಾದ ಶಿರೂರು ಮಠಾಧೀಶ ಲಕ್ಷ್ಮೀವರತೀರ್ಥ ಶ್ರೀಗಳು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ  ವಿಧಿವಶರಾಗಿದ್ದಾರೆ.

ಬುಧವಾರ ಬೆಳಗ್ಗೆ ಫುಡ್ ಪಾಯ್ಸನ್ ಹಿನ್ನೆಲೆಯಲ್ಲಿ ಮಣಿಪಾಲದ ಕೆಎಂಸಿಗೆ ದಾಖಲಾಗಿದ್ದ ಶ್ರೀಗಳ ಆರೋಗ್ಯ ಬಿಗಡಾಯಿಸಿತ್ತು. ಹೀಗಾಗಿ ಶ್ರೀಗಳನ್ನು ವೆಂಟಿಲೇಟರ್ ನಲ್ಲಿ ಇಡಲಾಗಿತ್ತು. ಅಲ್ಲದೇ ಡ್ರಿಪ್ಸ್ ಕೂಡ ಹಾಕಲಾಗಿತ್ತು.

ಕಳೆದ ಕೆಲ ತಿಂಗಳುಗಳಿಂದ ಶ್ರೀಗಳಿಗೆ ಆಗಾಗ ಆರೋಗ್ಯ ಸಮಸ್ಯೆ ಎದುರಾಗುತ್ತಲೇ ಇತ್ತು. ಈ ಹಿಂದೆ ಥೈರಾಯ್ಡ್ ಸಮಸ್ಯೆ ಇದ್ದಿದ್ದರಿಂದ ಶಿರೂರು ಶ್ರೀಗಳಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರದ ದಿನಗಳಲ್ಲಿ ಪದೇ ಪದೇ ಆಸ್ಪತ್ರೆಗಳಿಗೆ ಚೆಕಪ್ ಗೆ ತೆರಳುತ್ತಿದ್ದ ಶ್ರೀಗಳು ಒಮ್ಮೆ ಗುಣಮುಖರಾದ್ರೆ ಮತ್ತೊಮ್ಮೆ ಅನಾರೋಗ್ಯಕ್ಕೆ ಈಡಾಗುತ್ತಲೇ ಇದ್ದರು.

ಚುನಾವಣೆ ಸಂದರ್ಭ ನಿರ್ಜಲೀಕರದಿಂದ ಅಸ್ವಸ್ಥರಾಗಿದ್ದರು. ನಿನ್ನೆ ಬೆಳಗ್ಗೆ ಶ್ರೀಗಳನ್ನು ಕೆಎಂಸಿಗೆ ದಾಖಲಿಸಲಾಗಿತ್ತು. ಅವರು ರಕ್ತವಾಂತಿ ಮಾಡಿದ್ದರಿಂದ ಸಂಜೆಯಿಂದಲೇ ಕೃತಕ ಉಸಿರಾಟ ವ್ಯವಸ್ಥೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಇದೀಗ ಆಸ್ಪತ್ರೆಯಲ್ಲೇ ವಿಧಿವಶರಾಗಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *