ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ವಿನಾಯಕ್ ಮೇಟೆ ವಿಧಿವಶ

Public TV
1 Min Read

ಮುಂಬೈ: ಮುಂಬೈ-ಪುಣೆ ಎಕ್ಸ್‌ಪ್ರೆಸ್‍ವೇಯಲ್ಲಿ ಮುಂಜಾನೆ ನಸುಕಿನ ವಾತಾವರಣದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಶಿವಸಂಗ್ರಾಮ್ ಮುಖ್ಯಸ್ಥ ಹಾಗೂ ಹಿರಿಯ ರಾಜಕಾರಣಿ ವಿನಾಯಕ್ ಮೇಟೆ ಸಾವನ್ನಪ್ಪಿದ್ದಾರೆ.

ಪನ್ವೇಲ್ ಬಳಿಯ ಮಂದಪ್ ಸುರಂಗದ ಬಳಿ ವಿನಾಯಕ್ ಮೇಟೆ ಅವರ ಎಸ್‍ಯುವಿ ಕಾರು ಅಪಘಾತಕ್ಕೀಡಾಗಿದ್ದು, ಇದರಿಂದಾಗಿ ಅವರು ಗಂಭೀರವಾಗಿ ಗಾಯಗೊಂಡಿದ್ದರು. ಮರಾಠಾ ಸಮುದಾಯದ ಸಮಸ್ಯೆಗಳ ಕುರಿತು ಚರ್ಚೆ ನಡೆಸಲು ಏರ್ಪಡಿಸಿದ್ದ ಸಭೆಯಲ್ಲಿ ಪಾಲ್ಗೊಳ್ಳಲು ಮೇಟೆ ಅವರು ಮುಂಬೈಗೆ ತೆರಳುತ್ತಿದ್ದಾಗ ಅಪಘಾತ ಸಂಭವಿಸಿದ್ದು, ತಕ್ಷಣ ಅವರನ್ನು ನವಿ ಮುಂಬೈನ ಎಂಜಿಎಂ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಾಕಾರಿಯಾಗದೇ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಕಾರಿಗೆ ಡಿಕ್ಕಿ ಹೊಡೆದಿದ್ದಕ್ಕೆ ರಿಕ್ಷಾ ಚಾಲಕನ ಕಾಲರ್ ಎಳೆದಾಡಿ ಕಪಾಳಮೋಕ್ಷ ಮಾಡಿದ್ಲು

ಅರಬ್ಬಿ ಸಮುದ್ರದಲ್ಲಿ ಪೌರಾಣಿಕ ಮರಾಠ ಯೋಧ ಛತ್ರಪತಿ ಶಿವಾಜಿ ಮಹಾರಾಜರ ಗೌರವಾರ್ಥ ಭವ್ಯ ಸ್ಮಾರಕವನ್ನು ನಿರ್ಮಿಸುವ ಯೋಜನೆಯ ಮೇಲ್ವಿಚಾರಣೆಯ ಸಮಿತಿಯ ಮುಖ್ಯಸ್ಥರಾಗಿದ್ದರು. ಅವರ ನಿಧನಕ್ಕೆ ಇದೀಗ ಪಕ್ಷಾತೀತವಾಗಿ ರಾಜಕಾರಣಿಗಳು ಸಂತಾಪ ಸೂಚಿಸಿದ್ದಾರೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *