ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳಿ ನಂದಮೂರಿ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಸಂತಾಪ

Public TV
1 Min Read

ಬೆಂಗಳೂರು: ದಯವಿಟ್ಟು ನೈಟ್ ಜರ್ನಿ ವೇಳೆ ಸ್ವಲ್ಪ ಹುಷಾರಾಗಿರಿ ಎಂದು ಹೇಳುತ್ತಾ ನಟ ನಂದಮೂರಿ ಹರಿಕೃಷ್ಣ ನಿಧನಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

ನನ್ನ ಮನಸ್ಸಿಗೆ ತುಂಬ ನೋವಾಗುತ್ತಿದೆ. ನನ್ನ ದೊಡ್ಡ ಮಗಳು ಮದುವೆಗೆ ಕರಿಯಬೇಕಾದರೆ ಎಷ್ಟು ಖುಷಿಯಿಂದ ಮಾತನಾಡಿದ್ದರು. ಹೈದರಾಬಾದ್ ಕಾರ್ಯಕ್ರಮದಲ್ಲಿ ನಾನು ಅವರನ್ನು ಭೇಟಿ ಕೂಡ ಮಾಡಿದೆ. ಅದೇ ರೋಡಲ್ಲಿ ಈ ಹಿಂದೆಯೂ ಕೂಡ ಅಪಘಾತ ಆಗಿತ್ತು. ಇದರ ಮೂಲಕ ನಾನು ಅವರ ಫ್ಯಾಮಿಲಿಗೆ ಕೇಳೋದ್ ಒಂದೇ ದಯವಿಟ್ಟು ನೈಟ್ ಜರ್ನಿ ಬೇಡ, ಸ್ವಲ್ಪ ಹುಷಾರಾಗಿರಿ ಎಂದು ಹೇಳುತ್ತಾ ಶಿವರಾಜ್‍ಕುಮಾರ್ ಸಂತಾಪ ಸೂಚಿಸಿದರು. ಇದನ್ನು ಓದಿ: ತೆಲಂಗಾಣದ ನಲ್ಗೊಂಡ ಬಳಿ ಅಪಘಾತ – ಜ್ಯೂನಿಯರ್ NTR ತಂದೆ ನಂದಮೂರಿ ಹರಿಕೃಷ್ಣ ದುರ್ಮರಣ

ಆಂಧ್ರಪ್ರದೇಶ ಮಾಜಿ ಮುಖ್ಯಮಂತ್ರಿ, ನಟ ದಿವಂಗತ ನಂದಮೂರಿ ತಾರಕ ರಾಮಾರಾವ್ ಹಿರಿಯ ಪುತ್ರ ನಟ ನಂದಮೂರಿ ಹರಿಕೃಷ್ಣ ಅವರು ಚಲಿಸುತ್ತಿದ್ದ ಕಾರು ಇಂದು ತೆಲಂಗಾಣದ ನಲ್ಗೊಂಡ ಜಿಲ್ಲೆಯ ಅನ್ನೇಪರ್ತಿ ಬಳಿ ಅಪಘಾತಕ್ಕೀಡಾಗಿತ್ತು. ಅಪಘಾತದಲ್ಲಿ ಹರಿಕೃಷ್ಣ ಅವರಿಗೆ ಗಂಭೀರ ಗಾಯಗಳಾಗಿದ್ದು, ಕೂಡಲೇ ಅವರನ್ನು ಕಾಮಿನೇನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಇದನ್ನು ಓದಿ: ಎನ್‍ಟಿಆರ್ ಕುಟುಂಬಕ್ಕೆ ನಲ್ಗೊಂಡ ಮಾರ್ಗ ಶಾಪವೇ?

ಹರಿಕೃಷ್ಣ ಅವರು ಅಭಿಮಾನಿಯ ಪುತ್ರನ ಮದುವೆಗೆ ತೆರಳುತ್ತಿದ್ದರು. ಬೆಳಗ್ಗೆ 4.30ರ ಸುಮಾರಿನಲ್ಲಿ ಹೈದರಾಬಾದ್ ನಿಂದ ಆಂಧ್ರಪ್ರದೇಶದ ನೆಲ್ಲೂರಿಗೆ ತಾವೇ ಕಾರು ಚಾಲನೆ ಮಾಡಿಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಹರಿಕೃಷ್ಣ ಅವರು ಬಾಲನಟನಾಗಿ ಹಾಗೂ ನಟನಾಗಿ 13 ಚಿತ್ರಗಳಲ್ಲಿ ನಟಿಸಿದ್ದು, ಶ್ರಾವಣಮಾಸಂ ಅವರ ಕೊನೆಯ ಚಿತ್ರವಾಗಿತ್ತು. ಇದನ್ನು ಓದಿ: ಡ್ರೈವರಿಂದ ಸ್ಟಾರ್ ವರೆಗೂ ಎಲ್ಲರನ್ನೂ ಒಂದೇ ರೀತಿಯಾಗಿ ನೋಡ್ತಿದ್ರು: ಹರಿಕೃಷ್ಣ ಬಗ್ಗೆ ರವಿಶಂಕರ್ ಮಾತು

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

https://www.youtube.com/watch?v=2283Fb13–Y

Share This Article
Leave a Comment

Leave a Reply

Your email address will not be published. Required fields are marked *