‘ಕಾಂತಾರ’, ‘ಕೆಜಿಎಫ್‌’ನಿಂದ ಕನ್ನಡ ಸಿನಿಮಾ ವಿಶ್ವಮಟ್ಟದವರೆಗೆ ಮುಟ್ಟಿದೆ- ಶಿವಣ್ಣ

Public TV
1 Min Read

15ನೇ ಬೆಂಗಳೂರು ಚಿತ್ರೋತ್ಸವಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಚಾಲನೆ ನೀಡಿದ್ದಾರೆ. ಸಿನಿಮೋತ್ಸವಕ್ಕೆ ಡಾಲಿ ರಾಯಭಾರಿಯಾಗಿದ್ದು, ಕಾರ್ಯಕ್ರಮಕ್ಕೆ ನಟ ಶಿವಣ್ಣ (Shivarajkumar) ಭಾಗಿಯಾಗುವ ಮೂಲಕ ಸಾಥ್ ನೀಡಿದ್ದಾರೆ. ಕಾಂತಾರ(Kantara), ಕೆಜಿಎಫ್‌ನಿಂದ (KGF) ಕನ್ನಡ ಸಿನಿಮಾ ವಿಶ್ವಮಟ್ಟದವರೆಗೆ ಮುಟ್ಟಿದೆ ಎಂದು ಹೆಮ್ಮೆಯಿಂದ ಹೇಳಿದ್ದಾರೆ. ಇದನ್ನೂ ಓದಿ:ಇಂದಿನಿಂದ ಬೆಂಗಳೂರು ಚಿತ್ರೋತ್ಸವ: ಸಿಎಂ ಸಿದ್ದರಾಮಯ್ಯ ಚಾಲನೆ

ಇಂದು 15ನೇ ಬೆಂಗಳೂರು ಚಿತ್ರೋತ್ಸವಕ್ಕೆ ಚಾಲನೆ ಸಿಕ್ಕಿದೆ. ಇಂದಿನಿಂದ ಮಾರ್ಚ್ 7ರವರೆಗೂ ಸಿನಿಮಾ ಹಬ್ಬ ನಡೆಯಲಿದೆ ಎಂದು ಶಿವಣ್ಣ ಹೇಳಿದ್ದಾರೆ. ಫಿಲ್ಮ್ ಫೆಸ್ಟಿವಲ್‌ಗೆ 200 ಸಿನಿಮಾಗಳು ಬಂದಿವೆ. ಅದರಲ್ಲಿ ಕನ್ನಡ ಸಿನಿಮಾಗಳು ಕೂಡ ಇದೆ ಎಂಬುದು ಹೆಮ್ಮೆಯ ವಿಷಯವಾಗಿದೆ.

ಕಾಂತಾರ, ಕೆಜಿಎಫ್‌ನಿಂದ ಕನ್ನಡ ಸಿನಿಮಾ ವಿಶ್ವಮಟ್ಟದವರೆಗೆ ಮುಟ್ಟಿದೆ ಅಂದರೆ ನಾವೆಲ್ಲಾ ಹೆಮ್ಮೆ ಪಡುವ ವಿಚಾರ. ಕನ್ನಡ ಭಾಷೆ ಬಂದು 90 ವರ್ಷ ಆಯ್ತು ಇಂಡಸ್ಟ್ರಿಗೆ ಬಂದು. ಇದರಲ್ಲಿ ನನ್ನದು ಕೂಡ 38 ವರ್ಷ ಸೇವೆ ಇದೆ ಅನ್ನೋದು ಖುಷಿಯಿದೆ. ಈ ಸಂಭ್ರಮದಲ್ಲಿ ನಾನು ಭಾಗಿಯಾಗಿರೋದು ಖುಷಿಯಿದೆ ಎಂದು ಶಿವಣ್ಣ ಬೆಂಗಳೂರು ಚಿತ್ರೋತ್ಸವದಲ್ಲಿ ಮಾತನಾಡಿದ್ದಾರೆ.

Share This Article