ಶಿವಣ್ಣ ನಟನೆಯ ‘ಭೈರತಿ ರಣಗಲ್’ ಸಿನಿಮಾ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್

Public TV
2 Min Read

ಗೀತಾ ಪಿಕ್ಚರ್ಸ್ ತನ್ನ ಎರಡನೇ ಸಿನಿಮಾ ಘೋಷಣೆ ಮಾಡಿದ್ದು, ಶಿವರಾಜ್ ಕುಮಾರ್ (Shivraj Kumar) ಮತ್ತು ನಿರ್ದೇಶಕ ನರ್ತನ್ (Narthan) ಈ ಸಿನಿಮಾದ ಮೂಲಕ ಮತ್ತೆ ಒಂದಾಗುತ್ತಿದ್ದಾರೆ. ಐದು ವರ್ಷಗಳ ನಂತರ ಮಫ್ತಿ (Mufti) ಸಿನಿಮಾದ ಭೈರತಿ ರಣಗಲ್ (Bhairati Rangal) ಪಾತ್ರದ ಹಿನ್ನೆಲೆಯನ್ನು ಈ ಚಿತ್ರದಲ್ಲಿ ಬಿಚ್ಚಿಡಲಿದ್ದಾರೆ. ಹಾಗಾಗಿ ಇದು ಮಫ್ತಿ ಸಿನಿಮಾದ ಸೀಕ್ವೆಲ್ ಅಲ್ಲ, ಪ್ರೀಕ್ವೆಲ್ ಸಿನಿಮಾ ಎನ್ನಲಾಗುತ್ತಿದೆ. ಭೈರತಿ ರಣಗಲ್ ನ ರೋಚಕ ಸಂಗತಿಗಳನ್ನು ಈ ಸಿನಿಮಾದಲ್ಲಿ ತೋರಿಸಲಿದ್ದಾರಂತೆ ನಿರ್ದೇಶಕರು.

ಮಫ್ತಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ನಲ್ಲಿ ಹೊಸ ಸಂಚಲನ ಮೂಡಿಸಿದ್ದ ನಿರ್ದೇಶಕ ನರ್ತನ್, ಆ ನಂತರ ಯಶ್ ಗಾಗಿ ಅವರು ಸಿನಿಮಾ ಮಾಡಲಿದ್ದಾರೆ ಎಂದು ಸುದ್ದಿಯಾಗಿತ್ತು. ಬರೋಬ್ಬರಿ ಎರಡ್ಮೂರು ವರ್ಷಗಳ ಕಾಲ ಯಶ್ ಹಿಂದೆ ಸುತ್ತಿದರು ನರ್ತನ್. ಒಂದು ವರ್ಷಕ್ಕೂ ಹೆಚ್ಚು ಕಾಲ ಕೂತು ಯಶ್ ಗಾಗಿ ಕಥೆ ಬರೆದರು. ಆನಂತರ ಆ ಸಿನಿಮಾ ಆಗಲಿಲ್ಲ. ನಾನಾ ಕಾರಣಗಳಿಂದಾಗಿ ಯಶ್ ಗಾಗಿ ನರ್ತನ್ ಸಿನಿಮಾ ಮಾಡುವುದಿಲ್ಲ ಎನ್ನುವ ವಿಷಯ ಹೊರಬಿತ್ತು.

ಯಶ್ ಗಾಗಿ ಸಿನಿಮಾ ಆಗುವುದಿಲ್ಲ ಎಂದು ಗೊತ್ತಾಗುತ್ತಿದ್ದಂತೆಯೇ ತೆಲುಗು ನಟ ರಾಮ್ ಚರಣ್ ಗಾಗಿ ಮತ್ತೊಂದು ಕಥೆಯನ್ನು ಸಿದ್ದಮಾಡಿಕೊಂಡರಂತೆ ನರ್ತನ್. ಆ ಕಥೆಯನ್ನು ರಾಮ್ ಚರಣ್ ವರೆಗೂ ಮುಟ್ಟಿಸಿದರು ಎನ್ನುವ ಸುದ್ದಿಯಿದೆ. ಅದು ನಿಜವೋ, ಬರೀ ಗಾಳಿ ಸುದ್ದಿಯೋ ಅವರೇ ಹೇಳಬೇಕು. ಇತ್ತೀಚಿನ ದಿನಗಳಲ್ಲಿ ರಾಮ್ ಚರಣ್ ಕೂಡ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಎಂದು ಹೇಳಲಾಗುತ್ತಿದೆ. ಪ್ರತಿಭಾವಂತ ನಿರ್ದೇಶಕನಿಗೆ ಹೀಗಾದಾಗ ಹತಾಶೆ ಆಗುವುದು ನಿಜ. ಹಾಗಂತ ನರ್ತನ್ ನನ್ನು ಕೈ ಬಿಡಲಿಲ್ಲ ಶಿವರಾಜ್ ಕುಮಾರ್.

ಶಿವರಾಜ್ ಕುಮಾರ್ ವೃತ್ತಿ ಬದುಕಿನಲ್ಲಿ ಮಫ್ತಿ ಕೂಡ ಒಂದೊಳ್ಳೆ ಸಿನಿಮಾದ ಯಾದಿಯಲ್ಲಿದೆ. ಹಾಗಾಗಿ ತಮ್ಮದೇ ಬ್ಯಾನರ್ ಸಿನಿಮಾದಲ್ಲಿ ನರ್ತನ್ ಗೆ ಅವಕಾಶ ನೀಡಿದ್ದಾರೆ ಶಿವಣ್ಣ. ಈ ಸಿನಿಮಾಗೆ ‘ಭೈರತಿ ರಣಗಲ್’ ಎಂದು ಹೆಸರಿಟ್ಟಿದ್ದಾರೆ. ಮಫ್ತಿಯಲ್ಲಿ ಶಿವರಾಜ್ ಕುಮಾರ್ ಮಾಡಿದ್ದ ಪಾತ್ರದ ಹೆಸರು ಇದಾಗಿದೆ. ಈ ಸಿನಿಮಾ ಕುರಿತು ಗೀತಾ ಪಕ್ಚರ್ಸ್ ಹಲವು ಮಾಹಿತಿಗಳನ್ನು ಹಂಚಿಕೊಂಡಿದೆ.

LIVE TV
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *