ಚುನಾವಣೆ ಬಂದರೆ ಬಿಜೆಪಿಯವರಿಗೆ ಮಸೀದಿ, ಪಾಕಿಸ್ತಾನ ನೆನಪಾಗುತ್ತದೆ: ಶಿವರಾಜ್ ತಂಗಡಗಿ

Public TV
1 Min Read

ಬೆಂಗಳೂರು: ಬಿಜೆಪಿ (BJP) ಅವರಿಗೆ ಕೆಲಸ ಇಲ್ಲ. ಹೀಗಾಗಿ ಶಿವಮೊಗ್ಗ ಗಲಭೆಗೆ ಸತ್ಯ ಶೋಧನ ಸಮಿತಿ ಅಂತ ಪ್ರವಾಸಕ್ಕೆ ಹೊರಟಿದ್ದಾರೆ ಎಂದು ಸಚಿವ ಶಿವರಾಜ್ ತಂಗಡಗಿ (Shivaraj Tangadai) ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿಯಿಂದ ಶಿವಮೊಗ್ಗ ಗಲಭೆಗೆ ಸತ್ಯ ಶೋಧನ ಸಮಿತಿ ಹೋಗಿರುವ ವಿಚಾರವಾಗಿ ವಿಕಾಸಸೌಧದಲ್ಲಿ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಅವರು ಇಂತಹ ಕೆಲಸಗಳನ್ನೇ ಮಾಡೋದು. ಬಿಜೆಪಿ (BJP) ಅವರಿಗೆ ಬೇರೆ ಕೆಲಸ ಇಲ್ಲ. ಚುನಾವಣೆಗಳು ಬಂದಾಗ ಬಿಜೆಪಿ ಅವರಿಗೆ ಪಾಕಿಸ್ತಾನ (Pakistan), ಹಿಂದೂ ಧರ್ಮ, ಗಣೇಶ, ಅಂಜನಾದ್ರಿ ಬೆಟ್ಟ, ಮಸೀದಿ ನೆನಪು ಆಗುತ್ತದೆ ಅಂತ ಕಿಡಿಕಾರಿದರು.

ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತನ ಕೊಲೆ ಆಯ್ತು. ಆಗ ಬಿಜೆಪಿ ಸರ್ಕಾರ ಏನು ಮಾಡುತ್ತಿತ್ತು?. ಚುನಾವಣೆ ಬಂದಾಗ ಮಾತ್ರ ಇಂತಹ ವಿಷಯ ಇವರಿಗೆ ನೆನಪು ಆಗುತ್ತದೆ. ಉಳಿದ ಟೈಂ ನಲ್ಲಿ ಯಾರಿಗೂ ನೆನಪಾಗೊಲ್ಲ. ಬಿಜೆಪಿ ಅವರು ಮಾತ್ರ ಹಿಂದುಗಳಾ? ನಾವು ಹಿಂದುಗಳು ಅಲ್ಲವಾ? ಕಾಂಗ್ರೆಸ್ ನಲ್ಲಿ ಹಿಂದುಗಳು ಇಲ್ಲವಾ ಅಂತ ವಾಗ್ದಾಳಿ ನಡೆಸಿದರು.

ಚುನಾವಣೆ ಬಂದಾಗ ಸಿಟಿ ರವಿ, ಕಟೀಲಿಗೆ ಹಿಂದೂಗಳು ನನೆಪಿ ಆಗುತ್ತಾರೆ. ಅಂಜನಾದ್ರಿ ಬೆಟ್ಟದ ನೆನಪು ಆಗುತ್ತದೆ.ಬಿಜೆಪಿ ಅವರು ಅಂಜನಾದ್ರಿ ಬೆಟ್ಟಕ್ಕೆ ಎಷ್ಟು ಹಣ ಕೊಟ್ಟರು. ಅವರ ಏನ್ ಅಭಿವೃದ್ಧಿ ಮಾಡಿದ್ರು?. ಏನು ಮಾಡಿಲ್ಲ.ಅವರು ಸುಳ್ಳು ಹೇಳ್ತಾರೆ. ನಾವು ಸತ್ಯ ಹೇಳ್ತೀವಿ. ಇವೆಲ್ಲ ಚುನಾವಣೆ ಗಿಮಿಕ್ ಅಷ್ಟೆ ಅಂತ ವಾಗ್ದಾಳಿ ನಡೆಸಿದರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್