ಭಯೋತ್ಪಾದಕರ ಹೆಸರಲ್ಲಿ ಬಿಜೆಪಿ ಸೈನಿಕರನ್ನು ಕೊಂದಿದೆ: ಶಿವರಾಜ್ ತಂಗಡಗಿ

Public TV
1 Min Read

ಕೊಪ್ಪಳ: ಭಯೋತ್ಪಾದಕರ ಹೆಸರಲ್ಲಿ ಬಿಜೆಪಿ ಸೈನಿಕರನ್ನು ಕೊಂದಿದೆ ಎಂದು ಮಾಜಿ ಸಚಿವ ಶಿವರಾಜ್ ತಂಗಡಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ಡಿಜಿಟಲ್ ಸದಸ್ಯತ್ವ ಅಭಿಯಾನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆರ್‌ಡಿಎಕ್ಸ್ ಬಾಂಬ್ ಹೇಗೆ ಬಂತು? ನೀವು ಸರ್ಕಾರ ಮಾಡುತ್ತಿರೋ ದನಕಾಯುತ್ತಿರೋ? ಭಯೋತ್ಪಾದಕರ ಹೆಸರಲ್ಲಿ ಸೈನಿಕರನ್ನು ಬಿಜೆಪಿ ಕೊಂದಿದೆ. ಚುನಾವಣೆ ಬಂದ ತಕ್ಷಣ ಇವರಿಗೆ ಪಾಕಿಸ್ತಾನ, ಸೈನಿಕರು ನೆನಪಾಗುತ್ತಾರೆ. ದೇಶದಲ್ಲಿ ಸರ್ಕಾರ ಸಿನಿಮಾ ಮಾಡುವ ಪರಸ್ಥಿತಿ ಬಂದಿದೆ ಎಂದು ದಿ ಕಾಶ್ಮೀರಿ ಫೈಲ್ ಸಿನಿಮಾ ಬಗ್ಗೆ ವ್ಯಂಗ್ಯವಾಡಿದರು.‌ ಇದನ್ನೂ ಓದಿ: ಸತತ 3ನೇ ದಿನ ಪೆಟ್ರೋಲ್, ಡೀಸೆಲ್ ದರ ಏರಿಕೆ

ಬಿಜೆಪಿಯವರು ಟಿಕೆಟ್ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದಾರೆ. ಬ್ರಿಟಿಷರಿಗೆ ಸಹಾಯ ಮಾಡಿದ್ದೇ ಬಿಜೆಪಿ ಮತ್ತು ಆರ್‍ಎಸ್‍ಎಸ್‍ನವರು ಎಂದು ವ್ಯಂಗ್ಯವಾಡಿದರು.  ಇದನ್ನೂ ಓದಿ: ಪಠ್ಯದಲ್ಲಿ ಭಗವದ್ಗೀತೆ ಅಳವಡಿಕೆಗೆ ಸ್ವಾಗತ: ಡಿಕೆಶಿ

Share This Article
Leave a Comment

Leave a Reply

Your email address will not be published. Required fields are marked *