ಇನ್ನೆರಡು ತಿಂಗಳಲ್ಲಿ ಶಿವರಾಜ್ ಕುಮಾರ್ ಮತ್ತು ಅರ್ಜುನ್ ಜನ್ಯ ಕಾಂಬಿನೇಷನ್ ಸಿನಿಮಾ: ರಮೇಶ್ ರೆಡ್ಡಿ

By
1 Min Read

ರ್ಜುನ್ ಜನ್ಯ ನಿರ್ದೇಶನದ ಚೊಚ್ಚಲು ಸಿನಿಮಾ ಇನ್ನೆರಡು ತಿಂಗಳಲ್ಲಿ ಸೆಟ್ಟೇರಲಿದೆ ಎಂದು ಪಬ್ಲಿಕ್ ಟಿವಿ ಡಿಜಿಟಲ್ ಗೆ ತಿಳಿಸಿದ್ದಾರೆ ನಿರ್ಮಾಪಕ ರಮೇಶ್ ರೆಡ್ಡಿ. ಇಂದು ಬೆಳಗ್ಗೆ ಅರ್ಜುನ್ ಜನ್ಯ ಅವರ ಜೊತೆ ಶಿವರಾಜ್ ಕುಮಾರ್ ಮನೆಗೆ ಆಗಮಿಸಿದ್ದ ಅವರು, ಒಂದೊಳ್ಳೆ ಕಥೆಯೊಂದಿಗೆ ನಮ್ಮ ಬ್ಯಾನರ್ ನಲ್ಲಿ ಶಿವರಾಜ್ ಕುಮಾರ್ ಅವರಿಗಾಗಿ ಸಿನಿಮಾ ಮಾಡುತ್ತಿದ್ದೇನೆ ಎಂದಿದ್ದಾರೆ.  ಅಲ್ಲದೇ, ಇದೊಂದು ಒಳ್ಳೆಯ ಸಿನಿಮಾ ಆಗಲಿದೆ ಎಂಬ ವಿಶ್ವಾಸವನ್ನೂ ಅವರು ವ್ಯಕ್ತ ಪಡಿಸಿದ್ದಾರೆ.

ಪಡ್ಡೆಹುಲಿ, ನಾತಿಚರಾಮಿ, 100, ಗಾಳಿಪಟ 2 ಸೇರಿದಂತೆ ಹಲವು ಸಿನಿಮಾಗಳನ್ನು ನಿರ್ಮಾಣ ಮಾಡಿರುವ ರಮೇಶ್ ರೆಡ್ಡಿ ಅವರು ನಾತಿಚರಾಮಿ ಸಿನಿಮಾಗಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಪಡೆದಿದ್ದಾರೆ. ಗಾಳಿಪಟ 2  ಇನ್ನಷ್ಟೇ ರಿಲೀಸ್ ಆಗಬೇಕು. ಈ ನಡುವೆ ಶ್ರೀಮುರುಳಿಗಾಗಿ ಒಂದು ಸಿನಿಮಾವನ್ನು ನಿರ್ಮಾಣ ಮಾಡುವುದಾಗಿಯೂ ರಮೇಶ್ ರೆಡ್ಡಿ ಅವರು ಘೋಷಿಸಿದ್ದರು. ಇದೀಗ ಅರ್ಜುನ್ ಜನ್ಯ ಅವರನ್ನು ನಿರ್ಮಾಪಕರನ್ನಾಗಿ ಲಾಂಚ್ ಮಾಡುತ್ತಿದ್ದಾರೆ. ಈ ಹಿಂದೆಯೂ ಇವರು ಖ್ಯಾತ ನೃತ್ಯ ನಿರ್ದೇಶಕ ಇಮ್ರಾನ್ ಸರ್ದಾರಿಯಾ ಅವರನ್ನು ಲಾಂಚ್ ಮಾಡಿದ್ದರು. ಇದನ್ನೂ ಓದಿ: ರಣ್‌ವೀರ್ ಅವರನ್ನು ದೀಪಿಕಾ ಪಡುಕೋಣೆ ಮದುವೆಯಾಗಿದ್ದು ಏಕೆ? ರಿವೀಲ್ ಆಯ್ತು ಸೀಕ್ರೆಟ್

ಅರ್ಜುನ್ ಜನ್ಯ ಅವರು ಕಥೆ ಹೇಳಿದಾಗ ತುಂಬಾ ಖುಷಿ ಆಯಿತು. ಶಿವರಾಜ್ ಕುಮಾರ್ ಅವರಿಗೆ ಸಿನಿಮಾ ಮಾಡಬೇಕು ಎಂದು ನಾನೂ ಅಂದುಕೊಂಡಿದ್ದೆ. ಅದು ಈಗ ಕೂಡಿ ಬಂದಿದೆ. ಅತ್ಯುತ್ತಮ ನಾಯಕಿ ಮತ್ತು ವಿಲನ್ ಪಾತ್ರಧಾರಿಯನ್ನು ಹುಡುಕುತ್ತಿದ್ದೇವೆ. ಸದ್ಯದಲ್ಲೇ ಎಲ್ಲ ಮಾಹಿತಿಯನ್ನೂ ಕೊಡಲಿದ್ದೇವೆ. ಅಂದುಕೊಂಡಂತೆ ಆದರೆ, ಇನ್ನೆರಡು ತಿಂಗಳು ಬಳಿಕೆ ಈ ಸಿನಿಮಾ ಸೆಟ್ಟೇರಲಿದೆ ಎನ್ನುತ್ತಾರೆ ನಿರ್ಮಾಪಕ ರಮೇಶ್ ರೆಡ್ಡಿ.

Live Tv

Share This Article
Leave a Comment

Leave a Reply

Your email address will not be published. Required fields are marked *