ಸಿದ್ಧರಾಮಯ್ಯ ಹಲ್ಲಿಲ್ಲದ ಹಾವು: ಶೋಭಾ ಕರಂದ್ಲಾಜೆ

Public TV
1 Min Read

ಬಾಗಲಕೋಟೆ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಹಲಿಲ್ಲದ ಹಾವಿನಂತಾಗಿದ್ದಾರೆ, ಆದರೆ ಆ ಹಾವಿಗೆ ಯಾರೂ ಹಾಲು ಎರೆಯಲ್ಲ ಎಂದು ಸಂಸದೆ ಶೋಭಾ ಕರಂದ್ಲಾಜೆ ಕಿಡಿಕಾರಿದ್ದಾರೆ.

ಜಮಖಂಡಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶ್ರೀಕಾಂತ್ ಕುಲಕರ್ಣಿ ಪರ ಮತಯಾಚನೆ ಮಾಡಿ ಮಾತನಾಡಿದ ಸಂಸದೆ, ಕಾಂಗ್ರೆಸ್-ಜೆಡಿಎಸ್ ಮೈತ್ರಿ ಬೆಂಗಳೂರಲ್ಲಿ ದೋಸ್ತಿ, ಹಳ್ಳಿಯಲ್ಲಿ ಕುಸ್ತಿ ಎನ್ನುವ ಹಾಗೇ ಆಗಿದೆ. ಆದರೆ ಉಪಚುನಾವಣೆಯ ಎಲ್ಲಾ ಕ್ಷೇತ್ರಗಳಲ್ಲೂ ಬಿಜೆಪಿ ಪರವಾದ ವಾತಾವರಣ ಕಾಣಿಸುತ್ತಿದೆ. ಕಳೆದ ನಾಲ್ಕು ತಿಂಗಳ ಸರ್ಕಾರದ ಕುರಿತು ಜನ ಬೇಸತ್ತಿದ್ದಾರೆ ಎಂದು ಆರೋಪಿಸಿದರು.

ಇದೇ ವೇಳೆ ಸಮ್ಮಿಶ್ರ ಸರ್ಕಾರ ಕುರಿತು ವಾಗ್ದಾಳಿ ನಡೆಸಿದ ಅವರು, ರಾಜ್ಯ ಸರ್ಕಾರ ಕೇವಲ ಭರವಸೆಗಳನ್ನು ಮಾತ್ರ ನೀಡುತ್ತಿದ್ದು, ಯಾವುದೇ ಅಭಿವೃದ್ಧಿ ಪರ ಯೋಜನೆಗಳನ್ನು ಜಾರಿ ಮಾಡಿಲ್ಲ. ಸರ್ಕಾರ ಘೋಷಿಸಿದ್ದ ಸಾಲಮನ್ನಾ ಇನ್ನೂ ರೈತರಿಗೆ ಮರಿಚಿಕೆಯಾಗಿ ಉಳಿದಿದೆ. ಆದರೆ ಸಿಎಂ ಕುಮಾರಸ್ವಾಮಿ ಅವರು ದೇವಸ್ಥಾನ ಸುತ್ತೋದನ್ನ ಮಾಡುತ್ತಿದ್ದಾರೆ. ಎಲ್ಲವನ್ನೂ ರಾಜ್ಯದ ಜನ ಗಮಿಸುತ್ತಿದ್ದಾರೆ. ಉಪ ಚುನಾವಣೆಯ ಮೂರು ಲೋಕಸಭಾ ಹಾಗೂ ಎರಡು ವಿಧಾನಸಭಾ ಕ್ಷೇತ್ರದಲ್ಲೂ ನಾವು ಗೆಲ್ಲುತ್ತೇವೆ ಎಂಬ ಆತ್ಮವಿಶ್ವಾಸವಿದೆ ಎಂದು ಭರವಸೆ ವ್ಯಕ್ತಪಡಿಸಿದರು. ಈ ವೇಳೇ ಬಹಿರಂಗ ಸಭೆಗೆ ಮಳೆ ಅಡ್ಡಿಪಡಿಸಿದ ಕಾರಣ ಬಿಜೆಪಿ ನಾಯಕರು ಅರ್ಧದಲ್ಲಿಯೇ ಸಭೆ ಮುಕ್ತಾಯಗೊಳಿಸಿ ತೆರಳಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *