ಇಂದು ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಕೆ- ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಸಾಥ್

Public TV
1 Min Read

ಉಡುಪಿ: ಉಡುಪಿ- ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಶೋಭಾ ಕರಂದ್ಲಾಜೆ ಇಂದು ಮಧ್ಯಾಹ್ನ 12.15 ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ. ನಾಮಪತ್ರ ಸಲ್ಲಿಸುವ ಸಂದರ್ಭ ಕೇಂದ್ರ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಜೊತೆಯಾಗಲಿದ್ದಾರೆ.

ಕಳೆದ ರಾತ್ರಿ 1 ಗಂಟೆಗೆ ಉಡುಪಿಗೆ ಆಗಮಿಸಿರುವ ನಿರ್ಮಲಾ ಸೀತಾರಾಮನ್ ಮಣಿಪಾಲದ ಕಂಟ್ರಿ ಇನ್ ಹೋಟೆಲ್‍ನಲ್ಲಿ ತಂಗಿದ್ದಾರೆ. ಉಡುಪಿ ಕೃಷ್ಣ ಮಠ ಭೇಟಿ ನೀಡಿ ಪರ್ಯಾಯ ಶ್ರೀಪಲಿಮಾರು ವಿದ್ಯಾಧೀಶ ಶ್ರೀಪಾದರ ಜೊತೆ ಮಾತುಕತೆ ನಡೆಸಲಿದ್ದಾರೆ.

ಬಳಿಕ ಮೀನುಗಾರ ಮುಖಂಡರ ಜೊತೆ ಚರ್ಚಿಸಿ, ಕಣ್ಮರೆಯಾದ ಮೀನುಗಾರರ ಕುಟುಂಬವನ್ನು ಭೇಟಿ ಮಾಡಿ ನೌಕಾಸೇನೆ ನಡೆಸಿರುವ ಕಾರ್ಯಾಚರಣೆ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮಲ್ಪೆಯಲ್ಲಿ ಇರುವ ಎರಡು ಕುಟುಂಬಗಳಿಗೆ ಧೈರ್ಯ ತುಂಬಲಿದ್ದಾರೆ.

ನಂತರ ಕಡಿಯಾಳಿಯಲ್ಲಿರುವ ಬಿಜೆಪಿ ಕಚೇರಿ ಸಮೀಪ ಸಭೆಯಲ್ಲಿ ಪಾಲ್ಗೊಳ್ಳುತ್ತಾರೆ. ಮಣಿಪಾಲದಲ್ಲಿ ಶೋಭಾ ಕರಂದ್ಲಾಜೆ ನಾಮಪತ್ರ ಸಲ್ಲಿಸುವ ವೇಳೆ ನಿರ್ಮಲಾ ಸೀತಾರಾಮನ್ ಜೊತೆಗಿರಲಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *