ನಿಷೇಧದ ನಡುವೆಯೂ ಶೋಭಾಯಾತ್ರೆ- ಎಸ್‍ಪಿ ವಾರ್ನಿಂಗ್‍ನಿಂದ ಜಾಗ ಖಾಲಿ ಮಾಡಿದ ಮುತಾಲಿಕ್

Public TV
2 Min Read

ಕೋಲಾರ: ಶ್ರೀರಾಮನವಮಿ ಅಂಗವಾಗಿ ಕೋಲಾರದಲ್ಲಿ ಹಲವು ವಿವಾದಗಳ ನಡುವೆ, ಆತಂಕದ ಮಧ್ಯೆ ಶ್ರೀರಾಮ ಶೋಭಾಯಾತ್ರೆ ನಡೆಯಿತು. ಪೊಲೀಸ್ ಬಿಗಿ ಬಂದೋಬಸ್ತ್ ನಡುವೆ ಶ್ರೀರಾಮನ ಭಕ್ತರು ಶೋಭಾಯಾತ್ರೆಯಲ್ಲಿ ಕುಣಿದು ಕುಪ್ಪಳಿಸಿದರು.

ಅದ್ದೂರಿಯಾಗಿ ಆಯೋಜನೆ ಮಾಡಿರುವ ಶ್ರೀರಾಮನ ಶೋಭಾಯಾತ್ರೆಗೆ ಚಾಲನೆ ನೀಡಿದ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್. ಇವತ್ತು ಶ್ರೀರಾಮನವಮಿ ಪ್ರಯುಕ್ತ ಶ್ರೀರಾಮಸೇನೆ ಶ್ರೀರಾಮನಿಗೆ ವಿಶೇಷ ಪೂಜೆ ಹಾಗೂ ಶೋಭಾಯಾತ್ರೆ ಆಯೋಜನೆ ಮಾಡಿತ್ತು. ಆದರೆ ಶುಕ್ರವಾರ ಮುಳಬಾಗಿಲಿನಲ್ಲಿ ಶೋಭಾಯಾತ್ರೆ ಮೇಲೆ ದುಷ್ಕರ್ಮಿಗಳು ಕಲ್ಲುತೂರಾಟ ಪ್ರಕರಣವಾದ ಕಾರಣ ಶೋಭಾಯಾತ್ರೆಗೆ ನೀಡಿದ್ದ ಅನುಮತಿಯನ್ನು ಪೊಲೀಸರು ವಾಪಸ್ ಪಡೆದಿದ್ದರು. ಅದರೆ ಮತ್ತೆ ಶ್ರೀರಾಮಸೇನೆ ಮುಖಂಡರು ಪೊಲೀಸ್ ಇಲಾಖೆಗೆ ಮನವಿ ಮಾಡಿಕೊಂಡ ನಂತರ ಶೋಭಾಯಾತ್ರೆಗೆ ಅನುಮತಿ ನೀಡಲಾಯಿತು. ಆದರೆ ಶೋಭಾಯಾತ್ರೆ ಇನ್ನೇನು ಆರಂಭವಾಗಬೇಕು ಎನ್ನುವಷ್ಟರಲ್ಲಿ ಯಾವುದೇ ಮುನ್ಸೂಚನೆ ನೀಡದೆ, ಅನುಮತಿ ಪಡೆಯದೆ ಶೋಭಾಯಾತ್ರೆ ಆಯೋಜನೆ ಮಾಡಿದ್ದ ಕೋಲಾರ ನಗರದ ಎಂ.ಜಿ.ರಸ್ತೆಯಲ್ಲಿ ಪ್ರಮೋದ್ ಮುತಾಲಿಕ್  ಬಂದಿದ್ದರು.

ಆದರೆ ಈ ಹಿಂದೆ ಪ್ರಮೋದ್ ಮುತಾಲಿಕ್ ಅವರಿಗೆ ಜಿಲ್ಲೆಯ ಪ್ರವೇಶಕ್ಕೆ ಜಿಲ್ಲಾಡಳಿತ ನಿರ್ಭಂದ ವಿಧಿಸಿದ್ದ ಕಾರಣ ಅವರಿಗೆ ಶೋಭಾಯಾತ್ರೆಯಲ್ಲಿ ಭಾಗವಹಿಸಲು ಅವಕಾಶ ನೀಡದೆ ಕೇವಲ ಶ್ರೀರಾಮನಿಗೆ ಪೂಜೆ ಸಲ್ಲಿಸಿ. 20 ನಿಮಿಷಗಳ ಕಾಲವಾಕಾಶ ಕೊಟ್ಟು ಪೊಲೀಸರು ವಾಪಸ್ ತೆರಳುವಂತೆ ಸೂಚನೆ ನೀಡಿದರು. ಮುತಾಲಿಕ್ ಶ್ರೀರಾಮನಿಗೆ ಪೂಜೆ ಸಲ್ಲಿಸಿ ಶಿವಾಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕೇಸರಿ ಬಾವುಟ ಹಾರಿಸಿ ಭಾರತ್ ಮಾತಾಕಿ ಜೈ ಘೋಷಣೆ ಕೂಗಿ ಹೊರಟರು. ಇದೇ ವೇಳೆ ಮಾತನಾಡಿದ ಮುತಾಲಿಕ್, ಕೋಲಾರ ಪಾಕಿಸ್ತಾನದಲ್ಲಿಲ್ಲ ನಾನು ಕೋಲಾರಕ್ಕೆ ಬಾರದಂತೆ ನಿರ್ಬಂಧ ವಿಧಿಸಲಾಗಿದೆ. ಇದು, ತಪ್ಪು ಯಾರು ಸಂಚು ಮಾಡಿ ಗಲಭೆ ಸೃಷ್ಟಿಸುತ್ತಾರೋ ಅವರನ್ನು ಬಂಧಿಸಬೇಕು ಎಂದರು. ಇದನ್ನೂ ಓದಿ: ಚಂದ್ರು ಹತ್ಯೆ ಕೇಸ್‌ಗೆ ಬಿಗ್ ಟ್ವಿಸ್ಟ್- ಘಟನೆಯ ಇಂಚಿಂಚು ಮಾಹಿತಿ ನೀಡಿದ ಸ್ನೇಹಿತ ಸೈಮನ್ ರಾಜ್

ಪೊಲೀಸರ ಸೂಚನೆ ಮೇರೆಗೆ ಕೋಲಾರದಿಂದ ಪ್ರಮೋದ್ ಮುತಾಲಿಕ್ ವಾಪಸ್ ಹೋಗಿದ್ದಾರೆ. ಅಷ್ಟೊತ್ತಿಗಾಗಲೇ ಶೋಭಾಯಾತ್ರೆಗೆ ಮಾಡಿಕೊಂಡಿದ್ದ ಸಿದ್ಧತೆ ಹಿನ್ನೆಲೆ ಹಾಗೂ ನಗರದ ಎಂ.ಜಿ.ರಸ್ತೆಯಲ್ಲಿ ಶ್ರೀರಾಮನ ಪ್ರತಿಷ್ಠಾಪನೆ ಮಾಡಿದ್ದ ಶ್ರೀರಾಮ ಮೂರ್ತಿಯನ್ನು ವಿಸರ್ಜನೆ ಮಾಡುವ ಸಲುವಾಗಿ ಎಂ.ಜಿ ರಸ್ತೆ ಮೂಲಕ, ಗಾಂಧಿ ಚೌಕ್, ಕಾಲೇಜು ವೃತ್ತ, ಬಂಗಾರಪೇಟೆ ವೃತ್ತದ ಮೂಲಕ ಶ್ರೀರಾಮ ಮೂರ್ತಿಯ ಮೆರವಣಿಗೆ ಹಾಗೂ ಶೋಭಾಯಾತ್ರೆ ನಡೆಯಿತು. ಕೋಲಾರ ಎಸ್‍ಪಿ ಡಿ.ದೇವರಾಜ್ ಸ್ವತಃ ಬಂದೋಬಸ್ತ್ ಉಸ್ತುವಾರಿ ವಹಿಸಿಕೊಂಡು ಶೋಭಾಯಾತ್ರೆಗೆ ಅನುವು ಮಾಡಿಕೊಟ್ಟರು. ಈವೇಳೆ ಅಲ್ಲಿದ್ದ ಶ್ರೀರಾಮ ಸೇನೆ ಕಾರ್ಯಕರ್ತರು ಕುಣಿದು ಕುಪ್ಪಳಿಸಿ ಶೋಭಾಯಾತ್ರೆಯಲ್ಲಿ ಪಾಲ್ಗೊಂಡರು. ಶೋಭಾಯಾತ್ರೆ ಮಧ್ಯದಲ್ಲಿ ಸಂಸದ ಮುನಿಸ್ವಾಮಿ ಹಾಗೂ ಶಾಸಕ ರಾಜೂಗೌಡ ಕೂಡ ಶಾಭಾಯಾತ್ರೆಯಲ್ಲಿ ಕೆಲ ಕಾಲ ಭಾಗವಹಿಸಿ ನಂತರ ನಿರ್ಗಮಿಸಿದರು. ಇದನ್ನೂ ಓದಿ: ಚಂದ್ರು ಕೊಲೆ ಪ್ರಕರಣ- ಜಮೀರ್ ಹೇಳಿಕೆ ಬೆನ್ನಲ್ಲೇ ಸೈಮನ್ ರಾಜ್ ಕಣ್ಮರೆ

ಕಳೆದ 2 ದಿನಗಳಿಂದ ಹಲವು ವಿದಾದ ಗೊಂದಲಗಳನ್ನು ಸೃಷ್ಟಿ ಮಾಡಿದ್ದ, ಕೋಲಾರದ ಶೋಭಾಯಾತ್ರೆ ಕೊನೆಗೂ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಡೆಯಿತು. ಕ್ಷಣ ಕ್ಷಣದ ಬದಲಾವಣೆಗಳನ್ನು ಪೊಲೀಸರು ಮಾತ್ರ ಬುದ್ದಿವಂತಿಕೆಯಿಂದ ನಿಭಾಯಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದು ವಿಶೇಷ.

Share This Article
Leave a Comment

Leave a Reply

Your email address will not be published. Required fields are marked *