ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿ ಘರ್ಜನೆ- ಅಕ್ರಮವಾಗಿ ಕಟ್ಟಿಕೊಂಡಿದ್ದ ಅಂಗಡಿಗಳ ತೆರವು

Public TV
0 Min Read

ಮಂಡ್ಯ: ಸಕ್ಕರೆನಾಡು ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಜೆಸಿಬಿಗಳು ಘರ್ಜಿಸಿವೆ. ಮಂಡ್ಯ ನಗರಸಭೆ ಜಾಗದಲ್ಲಿ ಅಕ್ರಮವಾಗಿ ಕಟ್ಟಿಕೊಂಡಿದ್ದ ಅಂಗಡಿ ಮಳಿಗೆಗಳನ್ನ ತೆರವುಗೊಳಿಸಲಾಗಿದೆ.

ನಗರಸಭೆ ಆಯುಕ್ತ ನರಸಿಂಹಮೂರ್ತಿ ನೇತೃತ್ವದಲ್ಲಿ ನಡೆದ ಕಾರ್ಯಚರಣೆಯಲ್ಲಿ, ನಗರದ ಕಲಾಮಂದಿರ ರಸ್ತೆಯಲ್ಲಿದ್ದ ಹಲವು ಅಕ್ರಮ ಅಂಗಡಿ ಮಳಿಗೆಗಳನ್ನು ನೆಲಸಮ ಮಾಡಲಾಯಿತು.

ಈ ಸಂದರ್ಭ ಅಂಗಡಿ ಮಾಲೀಕರು ಆಯುಕ್ತರ ಕ್ರಮಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಜೀವನಾಧಾರವಾಗಿದ್ದ ಅಂಗಡಿಗಳನ್ನ ಕೆಡವಿದ್ರಿಂದ ಅಂಗಡಿ ಮಾಲೀಕರು ಕಂಗಾಲಾಗಿದ್ದಾರೆ.

 

Share This Article
Leave a Comment

Leave a Reply

Your email address will not be published. Required fields are marked *