ಸ್ವಕ್ಷೇತ್ರದ ಗ್ರಾಮಸ್ಥರಿಂದ ಸಚಿವರಿಗೆ ತರಾಟೆ – ಕಕ್ಕಾಬಿಕ್ಕಿಯಾದ ಹಾಲಪ್ಪ ಆಚಾರ್‌

Public TV
1 Min Read

ಕೊಪ್ಪಳ: ಸರ್ಕಾರಿ ಶಾಲೆಯಲ್ಲಿ (Government School) ಶಿಕ್ಷಕರ (Teacher) ಕೊರತೆ ಹಿನ್ನೆಲೆಯಲ್ಲಿ ಸಚಿವ ಹಾಲಪ್ಪ ಆಚಾರ್‌ಗೆ (Halappa Achar) ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ.

ಕೊಪ್ಪಳ (Koppala) ಜಿಲ್ಲೆಯ ಯಲಬುರ್ಗಾ ತಾಲೂಕಿನ ಚೌಡಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ. ಕಳೆದ 5 ವರ್ಷದಿಂದ ಶಾಲೆಯಲ್ಲಿ ಖಾಯಂ ಶಿಕ್ಷಕರಿಲ್ಲದೇ, ಕೇವಲ ಅತಿಥಿ ಶಿಕ್ಷಕರಿಂದ ಶಾಲೆ ನಡೆಸುತ್ತಿದ್ದಾರೆ. ಈ ಹಿನ್ನೆಲೆ ಶಿಕ್ಷಕರ ನೇಮಕಕ್ಕೆ ಆಗ್ರಹಿಸಿ ಅನೇಕ ಬಾರಿ ಯಲಬುರ್ಗಾ ಶಾಸಕರಾದ ಸಚಿವ ಆಚಾರ್‌ಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಆದರೆ, ಗ್ರಾಮಸ್ಥರ ಮನವಿಗೆ ಹಾಲಪ್ಪ ಆಚಾರ್‌ ಕಿವಿಕೊಟ್ಟಿಲ್ಲ‌. ಈ ಹಿನ್ನೆಲೆಯಲ್ಲಿ ಸಚಿವ ಹಾಲಪ್ಪ ಆಚಾರ್‌ಗೆ ಗ್ರಾಮಸ್ಥರು ತರಾಟೆ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ: ಮೋದಿ ಆಗಮನ ಎಫೆಕ್ಟ್-‌ ಗುಂಡಿ ಮುಕ್ತ ಭಾಗ್ಯ..!

ಘಟನೆಯ ಕುರಿತು ಕೂಡಲೇ ಎಚ್ಚೆತ್ತ ಸಚಿವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಫೋನ್ ಮಾಡಿ ಶಿಕ್ಷರನ್ನು ನಿಯೋಜನೆ ಮಾಡುವಂತೆ ಹೇಳಿದ್ದು, ಇದಕ್ಕೆ ಸುಮ್ಮನಾಗದ ಜನರು ಮತ್ತೇ ಸಚಿವ ಆಚಾರ್ ವಿರುದ್ಧ ಗರಂ ಆಗಿದ್ದು,‌ ನಮಗೆ ನಿಯೋಜನೆ ಬೇಡ, ಖಾಯಂ ಶಿಕ್ಷಕರನ್ನು ನೇಮಿಸಿ ಎಂದು ಒತ್ತಾಯಿಸಿದ್ದಾರೆ. ಗ್ರಾಮಸ್ಥರ ಆಕ್ರೋಶ ಕಂಡು ಕಕ್ಕಾಬಿಕ್ಕಿಯಾದ ಸಚಿವ ಹಾಲಪ್ಪ ಆಚಾರ್ ಅಲ್ಲಿಂದ ಕಾಲ್ಕಿತ್ತಿದ್ದಾರೆ. ಇದನ್ನೂ ಓದಿ: ಬೆಳಗಾವಿ ಮಹಾನಗರ ಪಾಲಿಕೆ ಮುಂದೆ MES ಸದಸ್ಯರ ನಾಡದ್ರೋಹಿ ಘೋಷಣೆ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *