ಅಫ್ತಾಬ್‍ನನ್ನು ನೇಣಿಗೆ ಹಾಕಿ: ಲವ್ ಜಿಹಾದ್ ಶಂಕೆ ವ್ಯಕ್ತಪಡಿಸಿದ ಶ್ರದ್ಧಾಳ ತಂದೆ

Public TV
2 Min Read

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಲೀವ್ ಇನ್ ರಿಲೇಷನ್ ಶಿಪ್‍ನಲ್ಲಿದ್ದ ((Live in relationship) ತನ್ನ ಗೆಳೆಯನಿಂದ ಬರ್ಬರವಾಗಿ ಹತ್ಯೆಯಾಗಿದ್ದ ಶ್ರದ್ಧಾಳ (Shraddha) ಕೊಲೆ ಪ್ರಕರಣ ಇದೀಗ ಬೇರೆ ರೀತಿಯ ತಿರುವು ಪಡೆದುಕೊಳ್ಳುತ್ತಿದೆ. ಈ ಬಗ್ಗೆ ಶ್ರದ್ಧಾಳ ತಂದೆ (Father) ಮಾತನಾಡಿ, ಘಟನೆ ಹಿಂದೆ ಲವ್ ಜಿಹಾದ್ ಇದೆ ಎಂದು ಶಂಕೆಯನ್ನು ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಮಾತನಾಡಿರುವ ಅವರು, ದೆಹಲಿ ಪೊಲೀಸರು ಸರಿಯಾದ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ನಾವು ನಂಬಿದ್ದೇವೆ. ಶ್ರದ್ಧಾ ಆಕೆಯ ಚಿಕ್ಕಪ್ಪನ ಸಂಪರ್ಕದಲ್ಲಿ ಹೆಚ್ಚಿದ್ದಳು. ನನ್ನನೊಂದಿಗೆ ಹೆಚ್ಚು ಮಾತನಾಡುತ್ತಿರಲಿಲ್ಲ. ಇದರಿಂದಾಗಿ ನಾನು ಅಫ್ತಾಬ್‍ನೊಂದಿಗೆ ಎಂದಿಗೂ ಸಂಪರ್ಕದಲ್ಲಿರಲಿಲ್ಲ ಎಂದ ಅವರು, ತನ್ನ ಮಗಳನ್ನು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿ ಅಫ್ತಾಬ್‍ಗೆ ಮರಣ ದಂಡನೆ ವಿಧಿಸಬೇಕು ಜೊತೆಗೆ ಲವ್ ಜಿಹಾದ್ ಕೋನದಲ್ಲೂ ಶಂಕೆ ವ್ಯಕ್ತವಾಗುತ್ತಿದೆ ಎಂದರು.

ಘಟನೆಗೆ ಸಂಬಂಧಿಸಿ ನಾನು ಮೊದಲು ಮುಂಬೈನ ವಸಾಯಿಯಲ್ಲಿ ದೂರು ದಾಖಲಿಸಿದ್ದೆ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ ಎಂದು ತಿಳಿಸಿದರು.

ಘಟನೆಯೇನು?: ಆರೋಪಿ ಅಫ್ತಾಬ್ ಪೂನಾವಾಲಾ ರಾಷ್ಟ್ರ ರಾಜಧಾನಿಯ ಕಾಲ್ ಸೆಂಟರ್‌ನಲ್ಲಿ ಕೆಲಸ ಮಾಡುತ್ತಿದ್ದ ಜೊತೆಗೆ ಆತ ಫುಡ್ ಬ್ಲಾಗರ್ ಕೂಡಾ ಆಗಿದ್ದ. ಅಫ್ತಾಬ್ ಹಾಗೂ ಶ್ರದ್ಧಾ ಡೇಟಿಂಗ್ ಆ್ಯಪ್ ಮೂಲಕ ಪರಿಚಯವಾಗಿದ್ದರು. ಅದಾದ ಬಳಿಕ ಮನೆಯವರ ವಿರೋಧದ ನಡುವೆಯೂ ಶ್ರದ್ಧಾ ಅಫ್ತಾಬ್‍ನೊಂದಿಗೆ ಲಿವ್ ಇನ್ ರಿಲೇಶನ್‍ಶಿಪ್‍ನಲ್ಲಿದ್ದಳು. ಇದರಿಂದಾಗಿ ಶ್ರದ್ಧಾ ಪೋಷಕರ ಮಾತನಾಡುವುದನ್ನು ನಿಲ್ಲಿಸಿದ್ದಳು.

ಪೊಲೀಸ್ ಮೂಲಗಳ ಪ್ರಕಾರ, 2009ರಿಂದ ಸಂಬಂಧ ಹೊಂದಿದ್ದ ಈ ಜೋಡಿ 2022ರಲ್ಲಿ ದೆಹಲಿಗೆ ಸ್ಥಳಾಂತರಗೊಂಡಿದ್ದರು. ಅವರು ಮಾರ್ಚ್-ಏಪ್ರಿಲ್‍ನಲ್ಲಿ ಬೇರೆ ಬೇರೆ ಪ್ರದೇಶಗಳಿಗೂ ಭೇಟಿ ನೀಡಿದ್ದರು. ಅದಾದ ಬಳಿಕ ದೆಹಲಿಯ ಛತ್ತರ್‍ಪುರ ಪ್ರದೇಶದಲ್ಲಿ ಫ್ಲಾಟ್ ಅನ್ನು ಬಾಡಿಗೆಗೆ ಪಡೆದು ವಾಸಿಸಲು ಪ್ರಾರಂಭಿಸಿದ್ದರು.

ಈ ವೇಳೆ ಮದುವೆ ವಿಷಯಕ್ಕೆ ಇಬ್ಬರ ಮಧ್ಯೆ ಜಗಳವಾಗಿದ್ದು, ಶ್ರದ್ಧಾಳನ್ನು ಅಫ್ತಾಬ್ ಕತ್ತು ಹಿಸುಕಿ ಕೊಲೆ ಮಾಡಿದ್ದಾನೆ. ಅದಾದ ಬಳಿಕ ಯಾರಿಗೂ ಅನುಮಾನ ಬಾರದಿರಲಿ ಎಂದು ಶ್ರದ್ಧಾ ಸಾಮಾಜಿಕ ಜಾಲತಾಣದ ಖಾತೆಯನ್ನು ಬಳಸಿ ಬೇರೆಯವರಿಗೆ ಆಕೆ ಸಕ್ರಿಯವಾಗಿದ್ದಾಳೆ ಎಂಬಂತೆ ತೋರಿಸಿದ್ದಾನೆ.

ಇನ್ನೂ ಆಕೆಯನ್ನು ಮಿನಿ ಗರಗಸದ ಮೂಲಕ 35 ತುಂಡುಗಳನ್ನು ಮಾಡಿ ಕ್ರೂರತೆ ಮೆರೆದಿದ್ದಾನೆ. ಅಷ್ಟಕ್ಕೆ ನಿಲ್ಲಿಸದ ಅಫ್ತಾಬ್ ಆಕೆಯ ದೇಹದ ಭಾಗಗಳನ್ನಿಡಲೆಂದು ಅದನ್ನಿಡಲೆಂದು ಒಂದು ಹೊಸ ಫ್ರಿಡ್ಜ್‌ನ್ನು ತೆಗೆದುಕೊಂಡು ಬಂದಿದ್ದಾನೆ. ನಂತರ ಕೊಳೆತ ವಾಸನೆ ಬಾರದಿರಲಿ ಎಂದು ಪ್ರತಿನಿತ್ಯ ಅಗರ ಬತ್ತಿ ಹಚ್ಚುತ್ತಿದ್ದ. ಅದಾದ ಬಳಿಕ ಪ್ರತಿನಿತ್ಯ ಶ್ರದ್ಧಾಳ ದೇಹದ ಒಂದೊಂದೆ ಭಾಗಗನ್ನು ದೆಹಲಿ ಕಾಡುಗಳಿಗೆ ತೆಗೆದುಕೊಂಡು ಹೋಗಿ ಹೂತುಹಾಕಿ ವಿಕೃತಿ ಮೆರೆದಿದ್ದ. ಇದನ್ನೂ ಓದಿ: ಮನೆಯಲ್ಲಿ ಶ್ರದ್ಧಾಳ ದೇಹದ ಪೀಸ್‍ಗಳಿದ್ರೂ ಬೇರೆ ಯುವತಿಯನ್ನು ಮನೆಗೆ ಕರೆದು ಸೆಕ್ಸ್ ಮಾಡ್ತಿದ್ದ!

ಇತ್ತ ಶ್ರದ್ಧಾಳ ಸ್ನೇಹಿತರು ಶ್ರದ್ಧಾಳ ಮೊಬೈಲ್ ಸ್ವಿಚ್ಛ್ ಆಫ್ ಆಗಿರುವುದನ್ನು ಕಂಡು ಕಂಗಾಲಾಗಿದ್ದಾರೆ. ಕೆಲ ಸಮಯ ಅವಳಿಗಾಗಿ ಹುಡುಕಲು ಪ್ರಾರಂಭಿಸಿದ್ದಾರೆ. ಆದರೂ ಆಕೆಯ ಸುಳಿವೇ ಸಿಗದಿದ್ದರಿಂದ ಶ್ರದ್ಧಾಳ ಪೋಷಕರಿಗೆ ತಿಳಿಸಿದ್ದಾರೆ. ವಿಷಯ ಗೊತ್ತಾಗುತ್ತಿದ್ದಂತೆ ಶ್ರದ್ಧಾಳ ತಂದೆ ಮುಂಬೈ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಪ್ರಾರಂಭಿಸಿದ್ದಾರೆ. ಈ ವೇಳೆ ಕೆಲ ಭಯಾನಕ ವಿಷಯ ತಿಳಿದಿದ್ದು, ಆರೋಪಿ ಅಫ್ತಾಬ್‍ನನ್ನು ಬಂಧಿಸಿದ್ದಾರೆ. ಇದನ್ನೂ ಓದಿ:  ನನ್ನನ್ನು ರಕ್ಷಿಸು, ಇಲ್ಲದಿದ್ರೆ ಆತ ಕೊಂದು ಬಿಡ್ತಾನೆ- ಸ್ನೇಹಿತನಿಗೆ ಮೊದಲೇ ತಿಳಿಸಿದ್ದ ಶ್ರದ್ಧಾ!

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *