ಪಂಚಮಸಾಲಿ ಮೀಸಲಾತಿ- ಮತ್ತೊಂದು ಹೋರಾಟಕ್ಕೆ ಸಿದ್ಧತೆ

Public TV
2 Min Read

– ಪಂಚಮಸಾಲಿ ಸ್ವಾಮೀಜಿಗಳಿಂದ ಪೂರ್ವಭಾವಿ ಸಭೆ

ಮಡಿಕೇರಿ: ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಶ್ರೀ ಜಯಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ಮತ್ತೆ ಹೋರಾಟ ಆರಂಭವಾಗಿದ್ದು, ಕಳೆದ ಮೂರು ದಿನಗಳ ಹಿಂದೆ ಚಾಮರಾಜನಗರ ಜಿಲ್ಲೆಯ ಮಲೆಮಹದೇಶ್ವರ ಬೆಟ್ಟದಿಂದ ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಚಾಲನೆ ನೀಡಲಾಗಿತ್ತು. ಇಂದು ಕೊಡಗು ಹಾಗೂ ಹಾಸನ ಜಿಲ್ಲೆಯ ಗಡಿಭಾಗಕ್ಕೆ ತಲುಪಿದೆ.

ಕೊಡಗಿನ ಕೋಡ್ಲಿಪೇಟೆಯ ಕಲ್ಲು ಮಠಕ್ಕೆ ಅಗಮಿಸಿದ ಪಂಚಮಸಾಲಿ ಪೀಠದ ಶ್ರೀ ಜಯಮೃತ್ಯುಂಜಯ ಸ್ವಾಮೀಜಿ, ಪ್ರತಿಜ್ಞಾ ಪಂಚಾಯತ್ ಅಭಿಯಾನಕ್ಕೆ ಚಾಲನೆ ನೀಡಿದರು.ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸುವ ಸಲುವಾಗಿ ಪ್ರತಿಜ್ಞಾ ಪಂಚಾಯತ್ ಅಭಿಯಾನವನ್ನು ಆರಂಭಿಸುತ್ತಿದ್ದು, ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಸೇರಿದಂತೆ ಅನೇಕ ಪಂಚಮಸಾಲಿ ಮುಖಂಡರು ಅಭಿಯಾನದಲ್ಲಿ ಭಾಗಿಯಾಗಿಯಾಗಿದ್ದರು. ಇದನ್ನೂ ಓದಿ: ನಂದಿಬೆಟ್ಟದ ಬಳಿ ಮತ್ತೆ ಭೂಕುಸಿತ – ತಾತ್ಕಾಲಿಕ ರಸ್ತೆಯೂ ಸಂಪೂರ್ಣ ಬಂದ್

ಕಾರ್ಯಕ್ರಮ ಉದ್ಘಾಟಿಸಿ ಮಾತಾನಾಡಿದ ಜಯಮೃತ್ಯುಂಜಯ ಸ್ವಾಮೀಜಿ, ಸೆಪ್ಟೆಂಬರ್ 15ರ ವರೆಗೆ ಎಲ್ಲ ಜಿಲ್ಲೆಗಳಲ್ಲಿ ಅಭಿಯಾನ ನಡೆಯಲಿದೆ. ಅಷ್ಟರಲ್ಲಿ ಸರ್ಕಾರ ನಮ್ಮ ಬೇಡಿಕೆ ಈಡೇರಿಸುವ ನಂಬಿಕೆ ಇದೆ. ಬೇಡಿಕೆ ಈಡೇರದಿದ್ದರೆ 30ರ ಬಳಿಕ ಧರಣಿ ಸತ್ಯಾಗ್ರಹ ಮತ್ತೆ ನಡೆಯಲಿದೆ. ಅಕ್ಟೋಬರ್ 1ರಂದು ಮಾಜಿ ಸಿಎಂ ಜೆ.ಎಚ್.ಪಟೇಲ್ ಅವರ ಜಯಂತಿ ಇರುವುದರಿಂದ ಅದೇ ದಿನ ಜಯಂತಿ ಆಚರಿಸಿ ಅದೇ ವೇದಿಕೆಯಲ್ಲಿ ಧರಣಿ ಸತ್ಯಾಗ್ರಹ ನಡೆಯಲಿದೆ. ಅಲ್ಲಿಯವರೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಅವಕಾಶ ನೀಡುವುದಿಲ್ಲ ಎಂಬ ನಂಬಿಕೆ ಇದೆ. ಸರ್ಕಾರ ಮತ್ತು ನಮ್ಮ ಹೋರಾಟದ ನಡುವೆ ಸಚಿವ ಸಿ.ಸಿ.ಪಾಟೀಲ್ ಇದ್ದಾರೆ. ಅವರ ಮೂಲಕ ಸರ್ಕಾರಕ್ಕೆ ಸಂಪೂರ್ಣ ಮಾಹಿತಿ ಹೋಗುತ್ತಿದೆ. ಹೀಗಾಗಿ ನಮ್ಮ ಬೇಡಿಕೆ ಈಡೇರುವ ವಿಶ್ವಾಸವಿದೆ ಎಂದು ತಿಳಿಸಿದರು.

ಮಾಜಿ ಶಾಸಕ ವಿಜಯಾನಂದ್ ಕಾಶಪ್ಪನವರ್ ಮಾತಾನಾಡಿ, ಈಗಾಗಲೇ ರಾಜ್ಯ ಸರ್ಕಾರ ಮೀಸಲಾತಿ ಬಗ್ಗೆ ಸಾಕಷ್ಟು ಮಾಹಿತಿಗಳನ್ನು ಕಲೆ ಹಾಕುತ್ತಿದೆ. ಮೀಸಲಾತಿ ನೀಡುತ್ತಾರೆ ಎನ್ನುವ ಭರವಸೆ ಇದೆ. ಇಲ್ಲದಿದ್ದರೆ ಕಳೆದ ಬಾರಿಯ ಹೋರಾಟದಲ್ಲಿ 10 ಲಕ್ಷ ಜನರು ಭಾಗಿಯಾಗಿದ್ದರು. ಈ ಬಾರಿ 20 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಜನ ಪ್ರತಿಭಟನೆಯಲ್ಲಿ ಭಾಗಿಯಾಗಲ್ಲಿದ್ದಾರೆ. ಅಲ್ಲಿಯವರೆಗೆ ಮುಂದುವರಿಯಲು ರಾಜ್ಯ ಸರ್ಕಾರ ಬೀಡಬರದು ಎಂದು ತಿಳಿಸಿದರು.

Share This Article
Leave a Comment

Leave a Reply

Your email address will not be published. Required fields are marked *