ಫ್ರೀ ಕೊಡುಗೆಗಳಿಗೆ ಕಡಿವಾಣ ಹಾಕಿ: ರಾಜ್ಯಗಳಿಗೆ ತಜ್ಞರ ಎಚ್ಚರಿಕೆ

Public TV
1 Min Read

ಮುಂಬೈ: ಕೇಂದ್ರ ಸರ್ಕಾರ ಜೂನ್‌ನಲ್ಲಿ ಜಿಎಸ್‌ಟಿ ಪರಿಹಾರವನ್ನು ಸ್ಥಗಿತಗೊಳಿಸಲಿದೆ. ರಾಜ್ಯ ಸರ್ಕಾರಗಳು ತಮ್ಮ ಆದಾಯಕ್ಕೆ ತಕ್ಕಂತೆ ಖರ್ಚು ಮಾಡಿಕೊಂಡು ಹೋಗದಿದ್ದರೆ, ಮುಂದೆ ಕಷ್ಟವನ್ನು ಎದುರಿಸಬೇಕಾಗಬಹುದು ಎಂದು ಆರ್ಥಿಕ ತಜ್ಞರು ಎಚ್ಚರಿಸಿದ್ದಾರೆ.

ರಾಜ್ಯ ಸರ್ಕಾರಗಳು ರೈತರ ಸಾಲ ಮನ್ನಾದಂತಹ ಯೋಜನೆ ಹಾಗೂ ಉಚಿತ ಕೊಡುಗೆಗಳನ್ನು ನೀಡುವುದಕ್ಕೆ ಕಡಿವಾಣ ಹಾಕಬೇಕು. ಕೇಂದ್ರ ಸರ್ಕಾರ ಜೂನ್‌ನಲ್ಲಿ ಜಿಎಸ್‌ಟಿ ಪರಿಹಾರ ಸ್ಥಗಿತಗೊಳಿಸುವುದರಿಂದ ರಾಜ್ಯಗಳು ಖರ್ಚುಗಳನ್ನು ಆದ್ಯತೆಯ ಮೇರೆಗೆ ಹೊಂದಾಣಿಕೆ ಮಾಡಿಕೊಳ್ಳಬೇಕಿದೆ ಎಂದು ಸಲಹೆ ನೀಡಿದ್ದಾರೆ. ಇದನ್ನೂ ಓದಿ: ಫ್ರೀಂ ಸ್ಕೀಂಗಳನ್ನು ನಿಲ್ಲಿಸಿ, ಇಲ್ಲದಿದ್ದರೆ ರಾಜ್ಯಗಳು ಶ್ರೀಲಂಕಾ ಆಗಬಹುದು: ಮೋದಿಗೆ ಅಧಿಕಾರಿಗಳ ಸಲಹೆ

ಇತ್ತೀಚೆಗೆ ಕೆಲ ಆರ್ಥಿಕ ತಜ್ಞರು ಉಚಿತ ಕೊಡುಗೆ ಹಾಗೂ ಸಬ್ಸಿಡಿಗಳಿಗೆ ಕಡಿವಾಣ ಹಾಕದಿದ್ದರೆ ಭಾರತಕ್ಕೂ ಶ್ರೀಲಂಕಾದ ಸ್ಥಿತಿ ಬರಬಹುದು ಎಂದು ಪ್ರಧಾನಿ ನರೇಂದ್ರ ಮೋದಿಗೆ ತಿಳಿಸಿದ್ದರು. ಇದರ ಬೆನ್ನಲ್ಲೇ ಎಸ್‌ಬಿಐ ಮುಖ್ಯ ಆರ್ಥಿಕ ಸಲಹೆಗಾರರ ಸಮಿತಿಯೊಂದು ಅಧ್ಯಯನ ನಡೆಸಿ ರಾಜ್ಯಗಳಿಗೂ ವರದಿ ನೀಡಿದೆ. ಇದನ್ನೂ ಓದಿ: ಮಠಗಳಿಂದ 30% ಕಮಿಷನ್ ಆರಂಭವಾಗಿದ್ದೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ: ಆಂದೋಲ ಶ್ರೀ

ಕೇಂದ್ರ ಸರ್ಕಾರ ನೀಡುವ ಜಿಎಸ್‌ಟಿ ತೆರಿಗೆಯ ಪಾಲು ರಾಜ್ಯಗಳ ಒಟ್ಟು ಆದಾಯದಲ್ಲಿ 5ನೇ ಒಂದರಷ್ಟು ಮಾತ್ರ ಆಗುತ್ತದೆ. ತೆಲಂಗಾಣ ರಾಜ್ಯ ತನ್ನ ಒಟ್ಟು ಆದಾಯದ ಶೇ.35 ರಷ್ಟು, ರಾಜಸ್ಥಾನ, ಛತ್ತೀಸ್‌ಗಢ, ಆಂಧ್ರಪ್ರದೇಶ, ಬಿಹಾರ, ಜಾರ್ಖಂಡ್, ಪಶ್ಚಿಮ ಬಂಗಾಳ ಹಾಗೂ ಕೇರಳ ರಾಜ್ಯಗಳು ಶೇ.5 ರಿಂದ ಶೇ.19 ರಷ್ಟು ಆದಾಯವನ್ನು ಇಂತಹ ಜನಪ್ರಿಯ ಯೋಜನೆಗಳಿಗೆ ವಿನಿಯೋಗಿಸುತ್ತಿದೆ. ರಾಜ್ಯಗಳು ತಮ್ಮ ಆದಾಯವನ್ನು ಮೀರಿ ಖರ್ಚು ಮಾಡುತ್ತಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *