ಸಿದ್ದಗಂಗಾ ಶ್ರೀಗಳ ಆರೋಗ್ಯ ಸ್ಥಿರವಾಗಿದೆ- ಆಪ್ತ ವೈದ್ಯ ಡಾ.ಪರಮೇಶ್ ಸ್ಪಷ್ಟನೆ

Public TV
1 Min Read

ತುಮಕೂರು: ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಶ್ರೀಗಳ ಆರೋಗ್ಯ ಸ್ಥಿರವಾಗಿದ್ದು, ಭಕ್ತರು ಆತಂಕ ಪಡುವ ಅಗತ್ಯವಿಲ್ಲವೆಂದು ಶ್ರೀಗಳ ಆಪ್ತ ವೈದ್ಯ ಡಾ. ಪರಮೇಶ್ ಸ್ಪಷ್ಟಪಡಿಸಿದ್ದಾರೆ.

ಇಂದು ಬೆಳಗ್ಗೆ ಶ್ರೀಗಳ ಆರೋಗ್ಯ ತಪಾಸಣೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ಶ್ರೀಗಳ ಆರೋಗ್ಯದಲ್ಲಿ ಕಫ ಕಾಣಿಸಿಕೊಂಡಿತ್ತು. ಬಿಜಿಎಸ್ ವೈದ್ಯರು ಅದನ್ನು ಕ್ಲಿಯರ್ ಮಾಡಿದ್ದರು. ಜೊತೆಗೆ ಪಲ್ಸ್ ರೇಟ್ ಕೂಡ ಕಡಿಮೆ ಆಗಿತ್ತು. ಚಿಕಿತ್ಸೆ ನೀಡಿದ ಬಳಿಕ ನಿನ್ನೆ ಸಂಜೆಯಿಂದಲೇ ಶ್ರೀಗಳು ಚೇತರಿಸಿಕೊಂಡಿದ್ದಾರೆಂದು ತಿಳಿಸಿದ್ದಾರೆ.

ಶ್ರೀಗಳು ಬೆಳಗ್ಗೆ 8 ಗಂಟೆಗೆ ವಿಶ್ರಾಂತಿಯಿಂದ ಎದ್ದು, ನಿತ್ಯ ಕರ್ಮಗಳನ್ನು ಮುಗಿಸಿದ್ದಾರೆ. ಬಳಿಕ ಇಷ್ಟಲಿಂಗ ಪೂಜೆ ನೆರವೇರಿಸಿ, ಪ್ರಸಾದ ಸೇವೆನೆ ಕೂಡ ಮಾಡಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ ಗಾಯವು ವಾಸಿಯಾಗುತ್ತಿದೆ. ಈ ಬಗ್ಗೆ ಭಕ್ತರು ಆತಂಕ ಪಡುವ ಅಗತ್ಯವಿಲ್ಲವೆಂದು ಹೇಳಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *