ಕಾಫಿನಾಡಲ್ಲಿ ಸಿದ್ದಗಂಗಾ ಶ್ರೀಗಳ ಹೆಜ್ಜೆ ಗುರುತು

Public TV
1 Min Read

ಚಿಕ್ಕಮಗಳೂರು: ಬದುಕೇ ಒಂದು ಸಂದೇಶದಂತೆ 111 ವರ್ಷ ಸಾರ್ಥಕ ಬದುಕು ನಡೆಸಿದ ನಡೆದಾಡುವ ದೇವರು ಸಿದ್ದಗಂಗಾ ಶ್ರೀಗಳ ಹೆಜ್ಜೆ ಗುರುತುಗಳು ಕಾಫಿನಾಡಲ್ಲೂ ಸಾಕಷ್ಟಿವೆ.

ಶೃಂಗೇರಿ ಮಠದ 35ನೇ ಗುರುಗಳಾದ ಅಭಿನವ ವಿದ್ಯಾತೀರ್ಥರ ವರ್ಧಂತ್ಯುತ್ಸವ ಅಂಗವಾಗಿ 1973ರಲ್ಲಿ ನಡೆದ ಧರ್ಮ ಸಮ್ಮೇಳನ ಹಾಗೂ ಸಾಹಿತ್ಯ ಸಮ್ಮೇಳನದಲ್ಲಿ ಸಿದ್ದಗಂಗಾ ಶ್ರೀಗಳು ಭಾಗವಹಿಸಿದ್ದರು. ಅದೇ ರೀತಿ 2003ರಲ್ಲಿ ರಂಭಾಪುರಿ ಪೀಠದಲ್ಲಿ ನಡೆದ ರೇಣುಕಾಚಾರ್ಯ ಜಯಂತಿ ಯುಗಮಾನೋತ್ಸವ ಹಾಗೂ ಕ್ಷೇತ್ರನಾಥ ವೀರಭದ್ರಸ್ವಾಮಿ ರಥೋತ್ಸವದ ಅಂಗವಾಗಿ ಆಯೋಜಿಸಿದ್ದ ಗುರುವಿರಕ್ತರ ಸಮಾವೇಶದಲ್ಲೂ ಸಿದ್ದಗಂಗಾ ಶ್ರೀಗಳು ಪಾಲ್ಗೊಂಡಿದ್ದರು.

1995ರಲ್ಲಿ ಕುದುರೆಮುಖ ಕಬ್ಬಿಣ ಮತ್ತು ಅದಿರು ಕಂಪನಿಯಲ್ಲಿ ಉದ್ಯೋಗಿಗಳಾಗಿದ್ದ ವೀರಶೈವ ಸಮುದಾಯದವರು ಮಾಡಿಕೊಂಡಿದ್ದ ಬಸವ ಸಮಿತಿ ಕಾರ್ಯಕ್ರಮದಲ್ಲಿ ಸಿದ್ದಗಂಗಾ ಶ್ರೀಗಳು ಉಪಸ್ಥಿತರಿದ್ದರು. ಇದೇ ವೇಳೆ ಕುದುರೆಮುಖದಲ್ಲಿ ಸ್ವಾಮೀಜಿ ಗಿಡವೊಂದನ್ನು ನೆಟ್ಟು, ಇಡೀ ಕುದುರೆಮುಖ ಕಂಪನಿಯನ್ನು ವೀಕ್ಷಣೆ ಮಾಡಿದ್ದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *