ಜ.31ಕ್ಕೆ ಸಿದ್ದಗಂಗಾ ಶ್ರೀಗಳ ಪುಣ್ಯಸ್ಮರಣೆ ಕಾರ್ಯಕ್ರಮ

Public TV
1 Min Read

ತುಮಕೂರು: ನಡೆದಾಡುವ ದೇವರು, ಶ್ರೀ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯಸ್ಮರಣಾ ಕಾರ್ಯಕ್ರಮವನ್ನು ಜನವರಿ 31ರಂದು ಬೆಳಗ್ಗೆ ನಡೆಸಲಾಗುತ್ತದೆ ಎಂದು ಸಿದ್ದಲಿಂಗ ಸ್ವಾಮೀಜಿಗಳು ತಿಳಿಸಿದ್ದಾರೆ.

ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಿದ್ದಲಿಂಗ ಸ್ವಾಮೀಜಿಗಳು, ಪೂಜ್ಯರ ಆಧ್ಯಾತ್ಮದ ಶಕ್ತಿಯಿಂದಲೇ ಸಕಲ ಕಾರ್ಯಗಳು ಸುಗಮವಾಗಿ ನಡೆದಿದೆ. ಪುಣ್ಯಸ್ಮರಣೆ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸುತ್ತೂರು ವೀರಸಿಂಹಾಸನ ಮಹಾಸಂಸ್ಥಾನ ಮಠದ ಶಿವರಾತ್ರಿ ದೇಶಿಕೇಂದ್ರ ಶ್ರೀಗಳು ವಹಿಸಲಿದ್ದಾರೆ. ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ನಿರ್ಮಲಾನಂದ ಸ್ವಾಮೀಜಿ, ಸಿರಿಗೆರೆ ತರಬಾಳು ಸಂಸ್ಥಾನಮಠದ ಶಿವಮೂರ್ತಿ ಶಿವಾಚಾರ್ಯ ಶ್ರೀಗಳು, ಆರ್ಟ್ ಆಫ್ ಲಿವಿಂಗ್‍ನ ಶ್ರೀ ರವಿಶಂಕರ್ ಗುರೂಜಿ, ಕನಕಪುರದ ಮುಮ್ಮಡಿ ನಿರ್ವಾಣಮಹಾಸ್ವಾಮೀಜಿ ದಿವ್ಯಸಾನಿಧ್ಯ ವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮವನ್ನು ಸಿಎಂ ಕುಮಾರಸ್ವಾಮಿ ಅವರು ಉದ್ಘಾಟಿಸಲಿದ್ದಾರೆ. ಎಲ್ಲ ಸಚಿವರು, ಶಾಸಕರು, ಸಂಸದರು, ಗಣ್ಯರು, ಮುಖಂಡರಿಗೆ ಆಮಂತ್ರಣ ನೀಡಲಾಗಿದೆ ಎಂದ ಶ್ರೀಗಳು, ಮಠ ಯಾವುದೇ ಜಾತಿ ಧರ್ಮಗಳಿಗೆ ಸೀಮಿತವಲ್ಲ ಎಂದು ಹೇಳಿದರು.

ಸಿದ್ದಗಂಗಾ ಶ್ರೀಗಳು ರೂಪಿಸಿದ್ದ ಕೆಲ ಯೋಜನೆಗಳು ಹಾಗೇ ಉಳಿದುಕೊಂಡಿವೆ. ಹೀಗಾಗಿ ಅವುಗಳನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಹೆಚ್ಚು ಗಮನ ನೀಡಲಾಗುವುದು. ಮಠದ ಆವರಣದಲ್ಲಿ ಶಿವಕುಮಾರ ಶ್ರೀಗಳ ಕಂಚಿನ ಪ್ರತಿಮೆ ನಿರ್ಮಾಣ, ದಾಸೋಹ ಭವನ, ಇನ್ನೀತರೆ ಕೆಲಸಗಳ ಬಗ್ಗೆ ಗಮನ ಹರಿಸಲಾಗುವುದು. ಗುರುಕಾರಣ್ಯ ಕಾರ್ಯ ಪರಂಪರೆ ಮುಂದುವರಿಸಲಾಗುತ್ತದೆ ಎಂದು ತಿಳಿಸಿದರು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *