ನಿನ್ನೆಗಿಂತಲೂ ಚೇತರಿಕೆ – ಕಣ್ಣು ತೆರೆದು ಭಕ್ತರನ್ನು ಆಶೀರ್ವಾದಿಸಿದ ನಡೆದಾಡುವ ದೇವರು!

Public TV
1 Min Read

ತುಮಕೂರು: ಅನಾರೋಗ್ಯದಿಂದ ಬಳಲುತ್ತಿರುವ ಶ್ರೀ ಶ್ರೀ ಶಿವಕುಮಾರ ಸ್ವಾಮಿಜಿಯವರು ತಮ್ಮನ್ನು ನೋಡಲು ಆಗಮಿಸಿದ ಭಕ್ತರನ್ನು ಕಣ್ಣು ತೆರೆದು ನೋಡಿ ಆಶೀರ್ವಾದಿಸಿದ್ದಾರೆ.

ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು ತಮ್ಮನ್ನು ನೋಡಲು ಬಂದ ಭಕ್ತರನ್ನು ಕಣ್ತೆರೆದು ವೀಕ್ಷಿಸಿದ್ದಾರೆ. ಅಷ್ಟೇ ಅಲ್ಲದೆ ಕಿರಿಯ ಶ್ರೀ ಸಿದ್ದಲಿಂಗಸ್ವಾಮೀಜಿಗಳು ಶ್ರೀಗಳ ಪಾದ ಸ್ಪರ್ಶಿಸಿ ನಮಸ್ಕರಿಸಿದ ವೇಳೆ ಕಣ್ಣು ತೆರೆದು ಮುಗುಳ್ನಕ್ಕಿದ್ದಾರೆ. ಕಿರಿಯ ಶ್ರೀಗಳ ಸಹಾಯದೊಂದಿಗೆ ಇಷ್ಟಲಿಂಗ ಪೂಜೆಯಲ್ಲಿ ನಡೆದಾಡುವ ದೇವರು ಭಾಗಿಯಾಗಿದ್ದು, ಅವರ ಪಕ್ಕದಲ್ಲೇ ಕುಳಿತು ಕಿರಿಯ ಶ್ರೀಗಳು ಇಷ್ಟಲಿಂಗ ಪೂಜೆ ನೆರವೇರಿಸಿದ್ದಾರೆ.

ಶ್ರೀಗಳ ಆರೋಗ್ಯದಲ್ಲಿ ನಿನ್ನೆಗಿಂತಲೂ ಇಂದು ಚೇತರಿಕೆ ಕಂಡುಬಂದಿದ್ದು, ಸ್ವಯಂ ಉಸಿರಾಟ ಮುಂದುವರಿಸಿದ್ದಾರೆ. ಶ್ರೀಗಳು ದಿನದಿಂದ ದಿನಕ್ಕೆ ಉತ್ತಮವಾಗಿ ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಅಲ್ಲದೇ ಎಂದಿನಂತೆ ಇಂದು ಕೂಡ ಶ್ರೀಗಳನ್ನು ನೋಡಲು ಮಠಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಿದ್ದಾರೆ.

ಸದ್ಯ ಸಿದ್ದಗಂಗಾ ಮಠದಲ್ಲೇ ಶ್ರೀಗಳಿಗೆ ಚಿಕಿತ್ಸೆ ಮುಂದುವರಿಸಲಾಗುತ್ತಿದ್ದು, ಎಂದಿನಂತೆ ರಕ್ತ ಪರೀಕ್ಷೆ, ಬಿ.ಪಿ. ಪಲ್ಸ್‌ಗಳ  ತಪಾಸಣೆಯನ್ನು ವೈದ್ಯರು ನಡೆಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *