ಹೆಲ್ಮೆಟ್ ಹಾಕಿದ್ರೆ ತಲೆ ಉಳಿಯುತ್ತೆ, ಮತ ಹಾಕಿದ್ರೆ ದೇಶ ಉಳಿಯುತ್ತೆ- ಸಿದ್ದಗಂಗಾ ಕಿರಿಯ ಶ್ರೀಗಳಿಂದ ಮತದಾನದ ಜಾಗೃತಿ

Public TV
1 Min Read

ತುಮಕೂರು: ಮತದಾನ ನಮ್ಮ ಸಂವಿಧಾನ ನಮಗೆ ಕೊಟ್ಟಿರುವ ಹಕ್ಕು. ಅದನ್ನು ಯಾವುದೇ ಕಾರಣದಿಂದ ಕಳೆದುಕೊಳ್ಳಬಾರದು. ಮತದ ಪಾವಿತ್ರತೆಯನ್ನು ಕಾಪಾಡಿಕೊಳ್ಳಿ ಎಂದು ಸಿದ್ದಗಂಗಾ ಕಿರಿಯ ಶ್ರೀಗಳು ಸಾರ್ವಜನಿಕರಲ್ಲಿ ಮನವಿ ಮಾಡುವ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.

ಕುಣಿಗಲ್ ನ ಕೆಂಪನಹಳ್ಳಿಯಲ್ಲಿ ನಡೆದ ಧಾರ್ಮಿಕ ಸಮಾರಂಭದಲ್ಲಿ ಮಾತನಾಡಿದ ಅವರು, ವಿಧಾನಸಭೆ ಚುನಾವಣೆ ಹತ್ತಿರ ಬರುತ್ತಿದೆ. ದಯವಿಟ್ಟು ಯಾರೂ ಮನೆಯಲ್ಲಿ ಕೂರದೇ ಕಡ್ಡಾಯವಾಗಿ ಮತಗಟ್ಟೆಗೆ ಹೋಗಿ ತಮಗೆ ಇಚ್ಛೆ ಬಂದ ಅಭ್ಯರ್ಥಿಗೆ ಮತದಾನ ಮಾಡಿ. ಉತ್ತಮ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳಾಗಿ ನಮ್ಮ ಮೇಲೆ ಇರುವ ಜವಾಬ್ದಾರಿ ಎಂದು ಭಕ್ತರಲ್ಲಿ ವಿನಂತಿ ಮಾಡಿಕೊಂಡರು.

ಹೆಲ್ಮೆಟ್ ಹಾಕಿದರೆ ತಲೆ ಉಳಿಯುತ್ತೆ ಮತ ಹಾಕಿದರೆ ದೇಶ ಉಳಿಯುತ್ತೆ ಎಂದು ಹೇಳುತ್ತಾರೆ. ಉತ್ತಮ ನಾಯಕನನ್ನು ಆಯ್ಕೆ ಮಾಡುವುದು ಪ್ರಜೆಗಳಾದ ನಮ್ಮ ಮೇಲೆ ಇರುವ ಜವಾಬ್ದಾರಿ. ಮತದಾನ ಮಾಡುವಂತೆ ಎಲ್ಲರನ್ನೂ ಪ್ರೋತ್ಸಾಹಿಸಿ ಎಂದು ಹೇಳಿದರು.

ತಾನೂ ಪ್ರತೀ ನಿತ್ಯ ಬಾಗಿಯಾಗುವ ಎಲ್ಲಾ ವೇದಿಕೆಯಲ್ಲಿ ಸಿದ್ದಲಿಂಗಸ್ವಾಮಿಗಳು ಮತದಾನದ ಮಹತ್ವದ ಕುರಿತು ಅರಿವು ಮೂಡಿಸುತಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *