ನಡೆದಾಡುವ ದೇವರ ಶ್ವಾಸಕೋಶದಲ್ಲಿ ಸೋಂಕು ಪತ್ತೆ – ಶ್ರೀಗಳ ಆಪ್ತ ವೈದ್ಯರು ಸ್ಪಷ್ಟನೆ

Public TV
1 Min Read

ತುಮಕೂರು: ಸಿದ್ದಗಂಗಾ ಶ್ರೀಗಳ ಶ್ವಾಸಕೋಶದಲ್ಲಿ ಸೋಂಕು ಕಾಣಿಸಿಕೊಂಡಿದೆ. ಕಳೆದ ಐದಾರು ದಿನದಿಂದ ಶ್ವಾಸಕೋಶದಲ್ಲಿ ಕಫ ಕಾಣಿಸಿಕೊಂಡಿದ್ದರ ಪರಿಣಾಮ ಇಂದು ಸೋಂಕು ಪತ್ತೆಯಾಗಿದೆ ಎಂದು ಶ್ರೀಗಳ ಆಪ್ತ ವೈದ್ಯ ಡಾ.ಪರಮೇಶ್ ಹೇಳಿದ್ದಾರೆ.

ಶ್ರೀಗಳ ಆರೋಗ್ಯದ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ವೈದ್ಯರು, ಶನಿವಾರ ಸಂಜೆ ಸೋಂಕು ತಗಲಿರುವುದು ರಕ್ತಪರೀಕ್ಷೆ ಮೂಲಕ ದೃಢಪಟ್ಟಿದೆ. ಸದ್ಯಕ್ಕೆ ಇಂದು ಬೆಳಗ್ಗೆಯಿಂದ ಚಿಕಿತ್ಸೆ ನೀಡಲಾಗುತ್ತಿದೆ. ಶ್ವಾಸಕೋಶ ಸೋಂಕಿಗೆ 5-10 ದಿನ ಚಿಕಿತ್ಸೆ ಮುಂದುವರಿಸಬೇಕಾಗುತ್ತದೆ. ಅಲ್ಲದೆ ಈ ಹಿಂದೆ ಪಿತ್ತಕೋಶದಲ್ಲಿ ಸೋಂಕು ಕಾಣಿಸಿಕೊಂಡಿದ್ದರಿಂದ ಸ್ಟಂಟ್ ತೆರವುಗೊಳಿಸಿ ಶಸ್ತ್ರಚಿಕಿತ್ಸೆ ಮಾಡಲಾಗಿತ್ತು. ಹಾಗಾಗಿ ಇದೀಗ ಪಿತ್ತಕೋಶಕ್ಕೆ ಸಂಬಂಧಿಸಿದ ಯಾವುದೇ ತೊಂದರೆ ಇಲ್ಲ. ಬದಲಾಗಿ ಶ್ವಾಸಕೋಶಕ್ಕೆ ಸೋಂಕು ಕಾಣಿಸಿಕೊಂಡಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಶ್ರೀಗಳನ್ನು ರೇಲಾ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿದ ಬಳಿಕ ಯಾವುದೇ ರೀತಿಯ ಸೋಂಕು ತಗುಲದಂತೆ ಎಷ್ಟೇ ನಿಗಾವಹಿಸಿದ್ರೂ ಕಳೆದ ಮೂರು ದಿನಗಳಿಂದ ಕಫ ಹೆಚ್ಚಾಗಿ ಇಂದು ಮತ್ತೆ ಸೋಂಕು ಕಾಣಿಸಿಕೊಂಡಿದೆ. ಜೊತೆಗೆ ನಿಶ್ಯಕ್ತಿಯೂ ಕಾಣಿಸಿಕೊಂಡಿದೆ. ಎಲ್ಲದಕ್ಕೂ ಶ್ರೀಮಠದಲ್ಲೇ ಚಿಕಿತ್ಸೆ ನಡೆಸಲು ಎಲ್ಲ ವ್ಯವಸ್ಥೆಯನ್ನು ನೀಡಲಾಗುತ್ತಿದೆ. ಬೇರೆ ಯಾವುದೇ ಆಸ್ಪತ್ರೆಗೆ ಶಿಫ್ಟ್ ಮಾಡುವ ಮಾತೇ ಇಲ್ಲ ಎಂದು ಕಿರಿಯ ಶ್ರೀ ಸಿದ್ದಲಿಂಗಸ್ವಾಮೀಜಿ ತಿಳಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *