ಸಿದ್ದರಾಮಯ್ಯ 500ರೂ. ಕೊಡುವಂತೆ ಹೇಳಿಲ್ಲ – ಬಿಜೆಪಿ ವಿರುದ್ಧ ಸತೀಶ್ ಕಿಡಿ

Public TV
1 Min Read

ಬೆಳಗಾವಿ: ಸಿದ್ದರಾಮಯ್ಯ (Siddaramaiah) ಈ ನಾಡು ಕಂಡ ಅಪರೂಪದ ನಾಯಕ. ಭ್ರಷ್ಟಾಚಾರ, ಅನ್ಯಾಯದ ವಿರುದ್ಧ ಹೋರಾಡಿದ ಧೀಮಂತ ನಾಯಕ. ಅವರ ಬಾಯಿಯಿಂದ ಇಂತಹ ಹೇಳಿಕೆ ಬರಲು ಸಾಧ್ಯವೇ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ (Satish Jarkiholi) ಹೇಳಿದರು.

ಬೆಳಗಾವಿಯಲ್ಲಿ (Belagavi) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನಾವಶ್ಯಕವಾಗಿ ಸಿದ್ದರಾಮಯ್ಯನವರ ವಿರುದ್ಧ ಅಪಪ್ರಚಾರ ಮಾಡಲಾಗುತ್ತಿದೆ. ಈ ಮೂಲಕ ಜನರ ಮನಸ್ಸನ್ನು ಬೇರೆ ಕಡೆ ಡೈವರ್ಟ್ ಮಾಡಲಾಗುತ್ತಿದೆ. ಕಾಂಗ್ರೆಸ್ (Congress) ಪ್ರಜಾಧ್ವನಿ (Prajadhwani) ಬಸ್‌ನಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಯೊಬ್ಬರಿಗೆ 500 ರೂ. ಕೊಟ್ಟು ಕರೆದುಕೊಂಡು ಬರುವಂತೆ ಹೇಳಲಿಲ್ಲ. ಚರ್ಚೆಯನ್ನೂ ನಡೆಸಲಿಲ್ಲ. ಬಿಜೆಪಿಗರು (BJP) ಸೇರಿದಂತೆ ಕೆಲ ವಿರೋಧಿಗಳು ವಿಡಿಯೋ ತಿರುಚಿ, ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದರು. ಇದನ್ನೂ ಓದಿ: ಕರ್ನಾಟಕ ವಿಧಾನಸಭಾ ಚುನಾವಣೆ – ಮಾ.4ಕ್ಕೆ ದಾವಣೆಗೆರೆಗೆ ದೆಹಲಿ ಸಿಎಂ

ರಾಜ್ಯದಲ್ಲಿ ಕಾಂಗ್ರೆಸ್ ಪ್ರಭಾವ ಹೆಚ್ಚುತ್ತಿದೆ. ಇದನ್ನು ಸಹಿಸದೆ ಬಿಜೆಪಿ ಪಕ್ಷ ಸಿದ್ದರಾಮಯ್ಯನವರ ವಿರುದ್ಧ ವಿಡಿಯೋ ತಿರುಚಿ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತಿದೆ. ರಾಜ್ಯದ ಜನತೆ ಇಂತಹ ವಿಡಿಯೋಗಳಿಗೆ ಮರುಳಾಗಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಕಾಂಗ್ರೆಸ್ ಬ್ರಿಟಿಷ್ ವಂಶಾವಳಿ – ಬೇರು ಸಮೇತ ಕಿತ್ತು ಹಾಕಬೇಕಿದೆ: ಬೊಮ್ಮಾಯಿ

Share This Article
Leave a Comment

Leave a Reply

Your email address will not be published. Required fields are marked *