ಸಾಮಾಜಿಕ ನ್ಯಾಯದ ಬಗ್ಗೆ ಬಿಜೆಪಿಗೆ ಪಾಠ ಹೇಳುವ ನೈತಿಕತೆ ಸಿದ್ದರಾಮಯ್ಯಗಿಲ್ಲ – ಜೋಶಿ

Public TV
2 Min Read

ಬೆಳಗಾವಿ: ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ (Congress) ಮತ್ತು ಸಿದ್ದರಾಮಯ್ಯ (Siddaramaiah) ಮನೆಗೆ ಹೋಗುವುದು ಗ್ಯಾರಂಟಿ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದರು. ‌

ಬೈಲಹೊಂಗಲ, ಸವದತ್ತಿಯಲ್ಲಿ ಶನಿವಾರ ಬಿಎಸ್‌ವೈ ಜೊತೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ (Vijaya Sankalpa Yatra) ಪಾಲ್ಗೊಂಡು ಮಾತನಾಡಿದ ಅವರು, ʼಕೈʼ ನಾಯಕರು ಎಲ್ಲೆಡೆ ಈ ಬಾರಿ ಕಾಂಗ್ರೆಸ್ ಗ್ಯಾರಂಟಿ ಅಂತಾ ಹೇಳಿಕೊಂಡು ತಿರುಗಾಡ್ತಿದ್ದಾರೆ. ಕಾಂಗ್ರೆಸ್ ಗ್ಯಾರಂಟಿ ಅಲ್ಲ, ಕಾಂಗ್ರೆಸ್ ಮನೆಗೆ ಹೋಗುವುದು ಗ್ಯಾರಂಟಿ ಎಂದು ತಿರುಗೇಟು ನೀಡಿದರು. ಇದನ್ನೂ ಓದಿ: ಹುಬ್ಬಳ್ಳಿ-ಬೆಂಗಳೂರು ನಡುವೆ ಮತ್ತೆ ವಿಶೇಷ ಎಕ್ಸ್‌ಪ್ರೆಸ್ ರೈಲುಗಳು ಸಂಚರಿಸಲಿವೆ – ಪ್ರಹ್ಲಾದ್‌ ಜೋಶಿ‌

ಸಿದ್ದರಾಮಯ್ಯ ಅವರು ಸಾಮಾಜಿಕ ನ್ಯಾಯದ ಬಗ್ಗೆ ಹೋದ ಕಡೆಯಲ್ಲೆಲ್ಲಾ ಮಾತಾಡ್ತಾರೆ. ಆದರೆ ಕಾಂಗ್ರೆಸ್‌ನಲ್ಲಿ ದಲಿತ ನಾಯಕರ ಬೆಳವಣಿಗೆಯನ್ನ ಹತ್ತಿಕ್ಕುತ್ತಿರುವವರು ಇದೇ ಸಿದ್ದರಾಮಯ್ಯ. ಸಾಮಾಜಿಕ ನ್ಯಾಯದ ಬಗ್ಗೆ ಸಿದ್ದರಾಮಯ್ಯ ಅವರಿಂದ ಬಿಜೆಪಿ ಪಾಠ ಕಲಿಯಬೇಕಿಲ್ಲ ಎಂದು ಟಾಂಗ್‌ ಕೊಟ್ಟರು.

ಸಿದ್ದರಾಮಯ್ಯ ಅವರು ಮೊದಲು ಮಲ್ಲಿಕಾರ್ಜುನ ಖರ್ಗೆ ಅವರನ್ನ ರಾಜ್ಯ ರಾಜಕಾರಣದಿಂದ ದೂರ ಸರಿಸಿದರು. ನಂತರ ಜಿ.ಪರಮೇಶ್ವರ್ ಅವರನ್ನ ಹತ್ತಿಕ್ಕಿದರು. ಇದೀಗ ಸಿದ್ದರಾಮಯ್ಯ ಅವರು ಕೋಲಾರಕ್ಕೆ ಹೋಗಿ ಕೆ.ಹೆಚ್.ಮುನಿಯಪ್ಪ ಅವರನ್ನ ಮುಗಿಸಲು ಹೊರಟಿದ್ದಾರೆ. ಮೂವರು ದಲಿತ ನಾಯಕರನ್ನ ಹತ್ತಿಕ್ಕಿರುವ ಸಿದ್ದರಾಮಯ್ಯ, ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುತ್ತಿರುವುದು ವಿಪರ್ಯಾಸ ಎಂದು ಟೀಕಿಸಿದರು. ಇದನ್ನೂ ಓದಿ: ಕರ್ನಾಟಕದ ಜನ ಒಳ್ಳೆಯವ್ರು, ಆದ್ರೆ ನಾಯಕರು ಕೆಟ್ಟವ್ರು – ರಾಜ್ಯವನ್ನ ಬರ್ಬಾದ್ ಮಾಡ್ತಿದ್ದಾರೆ: ಕೇಜ್ರಿವಾಲ್ ಕಿಡಿ

58 ವರ್ಷ ಆಡಳಿತ ನಡೆಸಿರುವ ಕಾಂಗ್ರೆಸ್ ಏನು ಮಾಡಲಿಲ್ಲ. ರೈತರ ಸಾಲ ಮನ್ನಾ ಮಾಡ್ತೀವಿ. ರೈತರ ಅಕೌಂಟ್‌ಗೆ ನೇರ ಹಣ ವರ್ಗಾವಣೆ ಮಾಡ್ತೀವಿ ಅಂತಾ ಸುಳ್ಳು ಹೇಳಿದ್ದರು. ಆದರೆ ಕಿಸಾನ್ ಸಮ್ಮಾನ್ ಮೂಲಕ ರೈತರ ಖಾತೆಗೆ 6 ಸಾವಿರ ಹಣವನ್ನು ಮೋದಿ ಅವರು ಕೊಟ್ರು. ಅಲ್ಲದೇ ರೈತ ನಾಯಕ ಬಿಎಸ್‌ವೈ 4 ಸಾವಿರ ಹೆಚ್ಚಿಗೆ ಸೇರಿಸಿ ಒಟ್ಟು 10 ಸಾವಿರ ಹಣವನ್ನು ರೈತರ ಖಾತೆಗೆ ಜಮಾ ಮಾಡಿಸಿದ್ದಾರೆ ಎಂದು ಬಣ್ಣಿಸಿದರು.

ಈಗ ಕಾಂಗ್ರೆಸ್‌ನವರು ಉಚಿತ ವಿದ್ಯುತ್ ಕೊಡ್ತೇವೆ ಅಂತಾ ಬುರುಡೆ ಬಿಡ್ತಿದ್ದಾರೆ. ಕಾಂಗ್ರೆಸ್ ಕಾಲದಲ್ಲಿ ಕರೆಂಟೇ ಕೊಡ್ತಿರಲಿಲ್ಲ. ಕೇಂದ್ರದಲ್ಲಿ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರ ಬಂದ ಮೇಲೆ 24 ಗಂಟೆ ಕರೆಂಟ್ ಕೊಡ್ತಿದ್ದೇವೆ. ಫ್ರೀ ಕರೆಂಟ್ ಕೊಡಲು ಸಾಧ್ಯವಿಲ್ಲ. ಬಿಜೆಪಿ ಕ್ವಾಲಿಟಿ ಕರೆಂಟ್ ಕೊಡುವ ನೀತಿ ಅನುಸರಿಸುತ್ತಿದೆ. ಜನರು ಕಾಂಗ್ರೆಸ್ ಸುಳ್ಳುಗಳಿಗೆ ಮರುಳಾಗಬಾರದು ಎಂದು ಮನವಿ ಮಾಡಿದರು. ಇದನ್ನೂ ಓದಿ: ಹಣ ಕೊಡದಿದ್ದಕ್ಕೆ ಬಿಜೆಪಿ ಬಾವುಟಕ್ಕೆ ಬೆಂಕಿ – ಚಿನ್ನ ಗಿರವಿಯಿಟ್ಟು ಕಾರ್ಯಕರ್ತರಿಗೆ ಹಣ ಕೊಟ್ಟ ಮುಖಂಡ

ಮಹದಾಯಿ ವಿಚಾರದಲ್ಲಿ ಕಾಂಗ್ರೆಸ್ ಕೇವಲ ರಾಜಕೀಯ ಮಾಡಿತು. ಗೋವಾಗೆ ಹೋಗಿ ಹನಿ ನೀರು ಕೊಡಲ್ಲ ಎಂದವರು ಸೋನಿಯಾ ಗಾಂಧಿಯವರು. ಆದರೆ ಮಹದಾಯಿ ಯೋಜನೆ ಅನುಷ್ಠಾನಗೊಳಿಸಲು ಬಿಜೆಪಿ ಸರ್ಕಾರ ದಿಟ್ಟ ಹೆಜ್ಜೆಯಿಟ್ಟಿದೆ. ಮಹದಾಯಿ ನೀರು ಬೈಲಹೊಂಗಲ, ಸವದತ್ತಿಗೆ ತರುತ್ತಿದ್ದರೆ ಅದು ಬಿಜೆಪಿ ಅನ್ನೋದನ್ನ ಜನ ಮರೆಯಬಾರದು ಎಂದು ಒತ್ತಿ ಹೇಳಿದರು.

Share This Article
Leave a Comment

Leave a Reply

Your email address will not be published. Required fields are marked *