ಸಿದ್ದರಾಮಯ್ಯ ಸಿಎಂ ಆಗಿದ್ದಕ್ಕೆ ಹರಕೆ ಒಪ್ಪಿಸಿದ ಅಭಿಮಾನಿ

Public TV
1 Min Read

ಮೈಸೂರು: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿ ಆಗಿದ್ದಕ್ಕೆ ಅವರ ಅಭಿಮಾನಿಯೊಬ್ಬರು ಇದೀಗ ಹರಕೆ ಒಪ್ಪಿಸಿದ್ದಾರೆ.

ಸಿದ್ದರಾಮಯ್ಯ ಅವರ ಹುಟ್ಟೂರು ಸಿದ್ದರಾಮನಹುಂಡಿ ಗ್ರಾಮದಲ್ಲಿರುವ ಸಿದ್ದರಾಮಯ್ಯ ಅವರ ಮನೆ ದೇವರು ಸಿದ್ದರಾಮೇಶ್ವರ ದೇವರಿಗೆ ಹರಕೆ ತೀರಿಸಿದ್ದಾರೆ. ಅನಿವಾಸಿ ಭಾರತೀಯ ರವಿಮಹಾದೇವ, ದೇವರಿಗೆ ಚಿನ್ನಲೇಪಿತ ಬೆಳ್ಳಿಯ ನಾಗಾಭರಣ ನೀಡಿ ಹರಕೆ ಸಲ್ಲಿಸಿದ್ದಾರೆ.

ದೇವೇಗೌಡನಹುಂಡಿಯ ಮಹಾದೇವರ ಪುತ್ರ ರವಿ ಸದ್ಯ ಸೌದಿ ಅರೇಬಿಯಾದಲ್ಲಿ ವಾಸವಾಗಿದ್ದಾರೆ. ಸಾಗರೋತ್ತರ ಕನ್ನಡಿಗರು ಸಂಸ್ಥೆಯ ಸಂಸ್ಥಾಪಕ ಹಾಗೂ ಜಂಟಿ ಕಾರ್ಯದರ್ಶಿ ಕೂಡ ಆಗಿದ್ದು, ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಹರಕೆ ಕಟ್ಟಿಕೊಂಡಿದ್ದರು. ಅದರಂತೆ ಈಗ ದೇವರಿಗೆ ವಿಶೇಷ ಪೂಜೆ ಸಲ್ಲಿಸಿ ಬಳಿಕ ಹರಕೆ ಅರ್ಪಣೆ ಮಾಡಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್