ತಂದೆಯಂತೆ ಮಧು ಬಂಗಾರಪ್ಪ ನಾಯಕರಾಗಿ ಬೆಳೆಯುತ್ತಾರೆ: ಸಿದ್ದರಾಮಯ್ಯ

Public TV
1 Min Read

ಶಿವಮೊಗ್ಗ: ತಂದೆಯಂತೆ ಮಧು ಬಂಗಾರಪ್ಪ ನಾಯಕರಾಗಿ ಬೆಳೆಯುತ್ತಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಹೇಳಿದ್ದಾರೆ.

ಇತ್ತೀಚೆಗಷ್ಟೇ ಜೆಡಿಎಸ್ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿರುವ ಮಧು ಬಂಗಾರಪ್ಪ ಅವರ ನಿವಾಸಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ಭೇಟಿ ನೀಡಿದ್ದರು. ಜಿಲ್ಲೆಯ ಸೊರಬ ತಾಲೂಕಿನ ಕುಬಟೂರಿನಲ್ಲಿ ಇರುವ ಅವರ ನಿವಾಸಕ್ಕೆ ಶುಕ್ರವಾರ ರಾತ್ರಿ ಭೇಟಿ ನೀಡಿ ಅಲ್ಲಿಯೇ ವಾಸ್ತವ್ಯಹೂಡಿದ್ದರು. ಇದನ್ನೂ ಓದಿ:  ಮೀನು ಹಿಡಿಯಲು ಹೋಗಿ ಪ್ರಾಣ ಬಿಟ್ಟ ಯುವಕ

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾಗಿ ಒಳ್ಳೆಯ ನಿರ್ಧಾರ ತೆಗೆದುಕೊಂಡಿದ್ದಾರೆ. ಮಧು ಅವರು ತಮ್ಮ ತಂದೆ ಬಂಗಾರಪ್ಪರಂತೆ ರಾಜ್ಯ ನಾಯಕರಾಗುತ್ತಾರೆ. ಬಂಗಾರಪ್ಪನವರ ಸ್ಥಾನವನ್ನು ತುಂಬುತ್ತಾರೆ ಎಂದು ಭವಿಷ್ಯ ನುಡಿದರು. ಇದನ್ನೂ ಓದಿ:  ಬಸ್ ಓಡಿಸಿಕೊಂಡಿದ್ದವನನ್ನು ಕರ್ಕೊಂಡು ಬಂದು ಶಾಸಕ ಮಾಡಿದೆ -ಜಮೀರ್ ವಿರುದ್ಧ ಹೆಚ್‍ಡಿಕೆ ವಾಗ್ದಾಳಿ

ಅಧಿಕೃತವಾಗಿ ಕಾಂಗ್ರೆಸ್ ಸದಸ್ಯತ್ವ ಪಡೆದ ಮಧು ಬಂಗಾರಪ್ಪ ಅವರನ್ನು ಒಂದು ಬಾರಿ ಶಾಸಕರನ್ನಾಗಿಸಿದ್ದೀರಿ, ಮುಂದಿನ ಬಾರಿ ಮತ್ತೆ ಅವರನ್ನು ಶಾಸಕರನ್ನಾಗಿ ಮಾಡಿ ಎಂದು ವಿನಂತಿಸಿದರು. ಮಧು ಬಂಗಾರಪ್ಪ ಅವರ ನಿವಾಸದ ಆವರಣದಲ್ಲಿ ಮಧು ಬಂಗಾರಪ್ಪನವರ ಜೊತೆ ವಾಯುವಿಹಾರ ನಡೆಸಿದ ಸಿದ್ದರಾಮಯ್ಯ ಬೆಳಗಿನ ಉಪಹಾರ ಮುಗಿಸಿ ಅಲ್ಲಿಂದ ಹಾನಗಲ್ ಪ್ರಚಾರಕ್ಕೆ ತೆರಳಿದರು.

Share This Article
Leave a Comment

Leave a Reply

Your email address will not be published. Required fields are marked *